ನನ್ನ ಪುಟಗಳು

13 ಮಾರ್ಚ್ 2016

೧೯.ಸಿಂಗಿರಾಜ

ಸಿಂಗಿರಾಜ
ಈತನ ಕಾಲ: ಕ್ರಿ.ಶ.ಸು.೧೫೦೦, ವೀರಶೈವ ಕವಿ.
ಈತನು ವಾರ್ಧಕಷಟ್ಪದಿಯಲ್ಲಿ ‘ಅಮಲಬಸವಚಾರಿತ್ರ’ (ಸಿಂಗಿರಾಜಪುರಾಣ) ಎಂಬ ಕೃತಿ ರಚಿಸಿದ್ದಾನೆ.
ಈ ಕೃತಿಯು ಬಸವಣ್ಣನವರ ಚರಿತ್ರೆಯನ್ನು ಕುರಿತದ್ದಾಗಿದೆ ಮತ್ತು ಈ ಕೃತಿಯಲ್ಲಿ ಸಿಂಗಿರಾಜನು ಪುರಾಣಕ್ಕಿಂತ ವಾಸ್ತವಕ್ಕೆ ಹೆಚ್ಚು ಒತ್ತುಕೊಟ್ಟಿರುವಂತೆ ಕಂಡುಬರುತ್ತದೆ.

ಅಮಲಬಸವಚಾರಿತ್ರದ ವಿಶೇಷತೆಗಳು:
೧) ದೇವಾಲಯದ ರಂಗ ಮಂಟಪದಲ್ಲಿರುವ ನಂದಿಕೋಡುಗಳ ಮೂಲಕ ಶಿವಲಿಂಗವನ್ನು ನೋಡುವ ವಿಧಾನ ಸಿಂಗಿರಾಜ ಪುರಾಣ ಮತ್ತು ರಾಘವಾಂಕ ಚರಿತ್ರೆಗಳಲ್ಲಿ ಉಲ್ಲೇಖವಾಗಿದೆ.
೨) ಚೆನ್ನಬಸವಣ್ಣನವರ ತಂದೆಯ ಹೆಸರನ್ನು `ಅಮಲಬಸವ ಚಾರಿತ್ರ್ಯ' (ಸಿಂಗಿರಾಜಪುರಾಣ) ವೊಂದನ್ನು ಬಿಟ್ಟು ಉಳಿದಾವ ಕೃತಿಗಳೂ ಹೇಳುವುದಿಲ್ಲ. ಸಿಂಗಿರಾಜ ಪುರಾಣದಲ್ಲಿ ಎರಡು ಮೂರು ಕಡೆ ಅಕ್ಕನಾಗಮ್ಮನ ಪತಿ ಶಿವಸ್ವಾಮಿ ಅಥವಾ ಶಿವದೇವನೆಂದು ಬರುತ್ತದೆ.
೩) ಚನ್ನಬಸವಣ್ಣನ ಜನನ ಕೂಡಲ ಸಂಗಮದಲ್ಲಿಯೇ ಆಗಿರುವುದು ಈ ಕೃತಿಯಿಂದ ಸಹಜವಾಗಿ ಖಚಿತಪಡುತ್ತದೆ. ಸುಮಾರು ಕ್ರಿ.ಶ. ೧೫೦೦ ರಲ್ಲಿ ರಚನೆಯಾದ ಸಿಂಗಿರಾಜನ ಸಿಂಗಿರಾಜಪುರಾಣದಲ್ಲಿ ಚನ್ನಬಸವೇಶ್ವರನ ತಂದೆ ಶಿವಸ್ವಾಮಿ ಅಥವಾ ಶಿವದೇವ ಎಂದು ಸ್ಪಷ್ಟವಾಗಿ ಬರುತ್ತದೆ. ಸಾಮಾನ್ಯವಾಗಿ ಉಳಿದ ಲಿಂಗಾಯತ ಪುರಾಣಕಾರರಿಗಿಂತ ಸಿಂಗಿರಾಜನು ಐತಿಹಾಸಿಕ ವಿಷಯಗಳಲ್ಲಿ ಕಲ್ಪನೆಗಳಿಗಿಂತ ವಾಸ್ತವಕ್ಕೆ ಹೆಚ್ಚು ನಿಷ್ಟನಾಗಿರುವುದರಿಂದ, ಸಿಂಗಿರಾಜ ಪುರಾಣದ ವಿವರಣೆಗೆ ಬಲ ಬರುತ್ತದೆ.  


******************* 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ