ನನ್ನ ಪುಟಗಳು

29 ಸೆಪ್ಟೆಂಬರ್ 2016

ಲಕ್ಷ್ಮೀಶ ಕವಿ

ಲಕ್ಷ್ಮೀಶ ಕವಿ ಮತ್ತು ಆತನ ಕೃತಿ ಪರಿಚಯ




              ಪೋಷಕರ ಅಸೆಯನ್ನು ನೆರೆವೆರಿಸುವ ಮಕ್ಕಳನ್ನು ನೀವು ಕಂಡಿರಬಹುದು. ಕರ್ನಾಟಕದ ಸಾಹಿತ್ಯದ ಇತಿಹಾಸದಲ್ಲಿ ತಂದೆಯ ಆಸೆಯಂತೆ ಮಗನು ಜೈಮಿನಿ ಋಷಿಗಳು ಸಂಸ್ಕೃತದಲ್ಲಿ ಬರೆದ ಭಾರತವನ್ನು ಕನ್ನಡದಲ್ಲಿ ರಚಿಸಿದ. ಪಂಪ, ರನ್ನ ಮತ್ತು ಕುಮಾರವ್ಯಾಸರನ್ನು ನೀಡಿದ ಕನ್ನಡ ಸಾಹಿತ್ಯಕ್ಕೆ ತನ್ನದೇ ಅದ ವಿಶಿಷ್ಟ ರೀತಿಯಲ್ಲಿ ಗುರುತಿಸಿ ಕೊಂಡ ಮಹಾಕವಿ ಯಾರು ಗೊತ್ತೇ .

ಆತನೇ ಚಿಕ್ಕಮಗಳೂರಿನ ಕಡೂರು ತಾಲೂಕು ದೇವನೂರು ಗ್ರಾಮದ ಶ್ರೀಕಾಂತ ಮುಂದೆ `ಲಕ್ಷ್ಮೀಶ' ಎಂದು ಪ್ರಸಿದ್ಧಿ ಪಡೆದು 'ಜೈಮಿನಿ ಭಾರತ' ಕೃತಿಯನ್ನು ರಚಿಸಿದ.

ಸಾಲ ಸಾಲಂಗಳಿಂ ಬಕುಳ ಕುಳ ದಿಂದೆ ಹಿಂ
ತಾಳ ತಾಳಗಳಿಂ ಮಾದಲದಲರ್ಗಳಿಂ ತ
ಮಾಲ ಮಾಲತಿಗಳಿಂ ಸಂರಂಭ ರಂಭ ದಿಂದ ಮಂದ ಮಂದಾರದಿಂದೆ….


         ಈ ಮೇಲಿನ ಪದ್ಯ ನೋಡಿದರೆ ಒಂದು ಸ್ವಾರಸ್ಯ ಇದೆ. ಒಂದೇ ಪದ ವನ್ನ ಎರಡು ಬಾರಿ ಉಪಯೋಗಿಸಿರುವುದು. ಸಾಲ, ತಾಳ, ದಲ ಕುಳ, ಮಾಲ, ರಂಭ. ಇದು ವಾರ್ಧಕ ಷಟ್ಪದಿಯಲ್ಲಿ ಅನುಪ್ರಾಸ ಅಲಂಕಾರದಲ್ಲಿ ನಿಬಧ್ಧ ವಾಗಿರುವ ಒಂದು ಪದ್ಯದ ಮೂರು ಸಾಲುಗಳು. ಇಂತಹ ಸುಂದರವಾದ ಕಾವ್ಯಗಳನ್ನು ರಚಿಸಿ ಕನ್ನಡ ಸಾಹಿತ್ಯ ಪ್ರಪಂಚವನ್ನು ಶ್ರೀಮಂತ ಗೊಳಿಸಿದ, ಕರ್ನಾಟ ಕವಿ ಚೂತವನ ಚೈತ್ರ ಎಂದು ಬಿರುದಾಂಕಿತ ಕವಿ ಲಕ್ಷ್ಮೀಶ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಲಕ್ಷ್ಮೀಶನ ಜನ್ಮ ಸ್ಥಳ. ಅಣ್ಣಯ್ಯ ದಂಪತಿಗಳಿಗೆ ಚೈತ್ರ ಶುಧ್ಧ ಹುಣ್ಣಿಮೆಯಂದು ಜನಿಸಿದ ಶ್ರೀಕಾಂತ ಮುಂದೆ ಲಕ್ಷ್ಮೀಶನಾಗಿ ಪ್ರಸಿಧ್ಧಿ ಹೊಂದಿದ. ತಂದೆಗೆ ಮಗ ಕೀರ್ತಿಶಾಲಿಯಾಗಬೇಕು ಮತ್ತು ತನಗೆ ಪ್ರಿಯವಾದ ಜೈಮಿನಿ ಭಾರತವನ್ನು ಕನ್ನಡದಲ್ಲಿ ಬರೆಯಬೇಕು ಎಂಬ ಮಹದಾಸೆಯಿಂದ ಮಗನಿಗೆ ದಿನಕ್ಕೊಂದು ಕತೆ ಹೇಳಿ ಮಗನ ಯೋಚನಾ ಶಕ್ತಿಗೆ ನೀರೆರೆದ. ಜೈಮಿನಿ ಎಂಬ ಋಷಿ ಸಂಸ್ಕೃತದಲ್ಲಿ ಬರೆದದನ್ನು ಕನ್ನಡದಲ್ಲಿ ಬರೆ,ಇದು ನನ್ನ ಆಸೆ ಎಂದ ಮಗನಲ್ಲಿ ತನ್ನ ಮನದಾಳದ ಇಂಗಿತವನ್ನು ಮತ್ತು ಅವನ ಜೀವನದ ಉದ್ದೇಶವನ್ನು ತಿಳಿಸಿದ.
          ದೇವರ ಅನುಗ್ರಹದಿಂದ ಮತ್ತು ಪ್ರಾರ್ಥನೆಯಿಂದ ಅವನಿಗೆ ಚಮತ್ಕಾರವಾಗಿ ಜೈಮಿನಿ ಕವಿಯ ಭಾರತದ ಪ್ರತಿ ಸಿಗುತ್ತದೆ. ಅವನ ಅಂತರಂಗದಲ್ಲಿ “ನೀನು ದೇವನೂರಿಗೆ ಹೋಗಿ ದೇವರಗುಡಿಯಲ್ಲೇ ಬರೆ, ನೀನು ಕವಿಯಾಗಬಲ್ಲೆ ” ಎಂದು ಕೇಳಿಸುತ್ತದೆ. ಕವಿ ಕಾವ್ಯ ರಚನೆಯನ್ನು ಶುರುಮಾಡುತ್ತಾನೆ.

"ವೀಣೆಯಿಂ ಗಾನಮಂ ನುಡಿಸವಂದೊಳೆನ್ನ ವಾಣಿಯಿಂ ಕವಿತೆಯಂ ಪೇಲಿಸಿದ" ಎಂದು ನಾರಾಯಣನೆ ಕರ್ತೃ ಎಂದು ಹೇಳುತ್ತಾನೆ.
           ಜೈಮಿನಿ ಭಾರತವು ಸ್ವತಂತ್ರವಾದ ಕಥೆಗಳ ಗೊಂಚಲು.ಲಕ್ಷ್ಮೀಶನಿಗೆ ನಿರೂಪಣೆಯ ಕೌಶಲ್ಯ ಮತ್ತು ಭಾಷೆಯ ಮೇಲಿನ ಪ್ರಭುತ್ವಗಳೆರಡೂ ಇವೆ. ಈ ಕಾವ್ಯದಲ್ಲಿ ೩೪ ಅಧ್ಯಾಯಗಳಿದ್ದು ವಾರ್ಧಕ ಷಟ್ಪದಿಯಲ್ಲಿರುವ ೧೯೩೬ ಕಾವ್ಯಗಳಿವೆ. ಈ ಕಾವ್ಯವು, ಮಹಾಭಾರತ ಯುದ್ಧವು ಮುಗಿದು, ಧರ್ಮರಾಯನ ಪಟ್ಟಾಭಿಷೇಕವಾದ ನಂತರದ ಘಟನೆಗಳ ಮೇಲೆ ಒತ್ತು ಕೊಟ್ಟಿದೆ.ಇದು ವ್ಯಾಸಭಾರತದ ಅಶ್ವಮೇಧಿಕಪರ್ವದಲ್ಲಿ ಬರುವ ಕಥಾಭಾಗ. ದೈವಿಕತೆಯನ್ನು ಸ್ಥಾಪಿಸುವ ಮತ್ತು ಉದ್ಧಟ ವೀರರಿಗೆ ವಿನಯದ ಪಾಠ ಕಲಿಸುವ ತನ್ನ ಉದ್ದೇಶದಲ್ಲಿ ಕವಿಯು ಯಶಸ್ಸು ಪಡೆದಿದ್ದಾನೆ.
          ಲಕ್ಷ್ಮೀಶನು ಷಟ್ಪದಿ ಪ್ರಕಾರದಲ್ಲಿ ಅಪಾರ ಸಾಧನೆ ಮಾಡಿದ್ದ ಕುಮಾರವ್ಯಾಸ, ರಾಘವಾಂಕ, ಚಾಮರಸ ಮುಂತಾದವರ ಸವಾಲನ್ನು ಎದುರಿಸಬೇಕಾಗಿತ್ತು. ರಾಮಾಯಣ ಮತ್ತು ಮಹಾಭಾರತಗಳ ಹಲವು ಸಾಧ್ಯತೆಗಳನ್ನು ಅವನಿಗಿಂತ ಹಿಂದಿನ ಹಿರಿಯ ಕವಿಗಳು ಸೂರೆ ಮಾಡಿದ್ದರು. ಆದ್ದರಿಂದಲೇ ಈ ಕವಿಯು, ತನ್ನ ಕಾವ್ಯವಸ್ತುವಾಗಿ, ಮಹಾಭಾರತ ಯುದ್ಧದ ನಂತರದ ಘಟನೆಗಳನ್ನು ಆರಿಸಿಕೊಂಡನು.

ಲಕ್ಷ್ಮೀಶ ಕಾವ್ಯಗಳಲ್ಲಿ ಬರುವ ವಿಶೇಷತೆಗಳು:

ಸುರ್ರನೆ, ಕಿರ್ರನೆ, ಕರ್ರನೆ, ಘರ್ರನೆ, ತಿರ್ರನೆ ಸರ್ರನೆ ಎಂಬ ಪದಗಳಿಂದ ರಣರಂಗದ ಭೀಭತ್ಸವನ್ನು ಹೀಗೆ ವರ್ಣಿಸುತ್ತಾನೆ.

ಸುರ್ರನೆ ಸುಲಿದು ಸುತ್ತಿ ಬೆಂ ಡಾಗೆ ಕುದುರೆಗಳ್
ಕಿರ್ರನೆ ಕಪಿಶ್ವರ್ಮ್ ಪಲಿರಿದು ಚೀರಲ್ಕೆ
ಕರ್ರನೆ ಕವಿಯೇ ಕತ್ತಲೆ ಶಿರೋಭ್ರಮನೆಯಿಂ ಕೃಷ್ಣಾ ಫಳುಗುನರ್ಗೆ ….

 
ಮೇಲಿನ ಕಾವ್ಯ ಅರ್ಜುನ ಮತ್ತು ಬಬ್ರುವಾಹನರ ನಡುವಿನ ಯುದ್ಧದ ವರ್ಣನೆಯ ಬಗೆ

ತೇರ ವಂಗ ಡದ ಜರ್ಜಾವರಂ ಗಜದ ಘಂಟಾರವಂ
ಹಾಯದ ಹೆಷಾರವಂ ನಡೆವ ಸೇನಾರವಂ ಭೇರಿಯ ಮಹಾರವಂ ಬಹಳ ಕಹಳಾರವಂ …

ರವಂ ಪದ ಹೇಗೆ ಪ್ರಯೋಗಿಸಿಧ್ಧನೆ ಎಂಬುದನ್ನು ನೋಡಬಹುದು.

ಪದಲಾಲಿತ್ಯದ ಕೆಲ ಸಾಲುಗಳನ್ನು ನೋಡೋಣ

ಈ ವನದ ನಡುನಡುವೆ ಕೊಳ ತೊಳ ಗುತಿರುತಿಹ ಸ
ವರದೊಲೆರೋ ಬೆಳೆ ಬೆಳೆದು ರಾ
ಜೀವದಳರಲರ ತುಳಿತುಳಿದಿಡಿದಿಡಿದ ಬಂಡ ನೋಡ ನೋಡನೆ ಸವಿದು ಸವಿದು

ಸವಿಯೇ ಪ್ರಿಯರಾಗಮದರಾಗಮದರಾಗಮದ
ನ ವಿಳಾಸ ಮೆಂದು ತಾಂಬೂಲಮಂ ತೋರ್ಪರ್ಮು
ಡಿವೊಡೆ ಬೇಕಾದಳರ್ಕಾದಲರ್ಕಾದಲರ್ಕಂಗಜಾಹವದೊಳೆಂದು

ಅಶ್ವಮೇಧ ಯಾಗದ ಕಥೆಯ ಸೂತ್ರದಲ್ಲಿ ಅನೇಕ ಸಣ್ಣ ಕಥೆಗಳನ್ನುಪೋಷಿಸಿದ ಜೈಮಿನಿ ಭಾರತ. ಇದರಲ್ಲಿ ಮರುತ್ತನ ಕತೆ, ಅನುಸಾಲ್ವನ ಕಾಳಗ ಸ್ವಾಹ ಪರಿಣಯ ಬಬ್ರುವಾಹನನ ಕಾಳಗ, ವೀರವರ್ಮನ ಕತೆ, ಚಂದ್ರಹಾಸನ ಕತೆ ಮುಂತಾದವು ಇವೆ. ಯುದ್ಧಗಳ ವರ್ಣನೆ ಸ್ತ್ರೀ ಹಾಗು ಪ್ರಕೃತಿ ವರ್ಣನೆಗಳು ಕಾವ್ಯದಲ್ಲಿ ವಿಸ್ತಾರವಾಗಿ ಬಂದಿವೆ.

ಲಕ್ಷ್ಮೀಶನಿಗೆ ಹುಟ್ಟಿದ ಸ್ಥಳದ ಬಗ್ಗೆ ತುಂಬಾ ಪ್ರೇಮ. ” ಸ್ವರ್ಗಕ್ಕಿಂತಲೂ ನಾನ ಓರೆ ನನಗೆ ದೊಡ್ಡದು , ದೇವನೂರೆ ಕೈಲಾಸ ” ಎಂದು ಹಲವು ಬಾರಿ ತನ್ನ ಊರನ್ನು ಕೊಂಡಾಡಿದ್ದಾನೆ. ಹುಟ್ಟಿದ ಊರಿಗೆ ಅಷ್ಟಿಷ್ಟು ಸೇವೆ ಸಲ್ಲಿಸ ಬೇಕೆಂಬುದು ಕವಿಯ ಆಸೆ. ಅದಕ್ಕಾಗಿ ಊರ ಮುಂದೆ ಸುಂದರವಾದ ತೋಟ ಮಾಡಿಸಿದ, ನೀರಿಗಾಗಿ ಬಾವಿಗಳನ್ನು ತೊಡಿಸಿದ, ಕೆರೆ ತುಂಬಲು ಕಾಲುವೆಗಳನ್ನು ತೆಗೆಸಿದ. ಲಕ್ಷ್ಮೀಶನ ಗುಡಿಯಲಿ ಒಂದು ಕೀರ್ತಿ ಮಂಟಪ ಮಾಡಿಸಿದ. ಜನರನ್ನು ಮತ್ತು ಕವಿಗಳನ್ನು ಸತ್ಕರಿಸಿದ. ಅಭಿಮಾನಿಗಳು ನೀಡಿದ ಧನ ಕನಕ ವಸ್ತುಗಳನ್ನು ಜನ ಸೇವೆಗೆ ನೀಡಿದ ಉದಾರ ಕವಿ ನಮ್ಮ ಲಕ್ಷ್ಮೀಶ.

'ಜೈಮಿನಿ ಭಾರತ' ಕುರಿತು
ಕಾವ್ಯದ ಹೆಸರು: ಜೈಮಿನಿ ಭಾರತ
ಕವಿಯ ಹೆಸರು: ಲಕ್ಷ್ಮೀಶ
ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ)
ಸ್ಥಳ/ಸ್ಥಳಗಳು: ಚಿಕ್ಕಮಗಳೂರು ಜಿಲ್ಲೆಯ ದೇವನೂರು. (ಗುಲ್ಬರ್ಗ ಜಿಲ್ಲೆಯ ಸುರಪುರ.
ಮತ-ಧರ್ಮ: ಬ್ರಾಹ್ಮಣ
ಆಶ್ರಯದಾತರು: ಯಾವ ರಾಜನೂ ಇಲ್ಲ
ಬಿರುದುಗಳು: ಕರ್ನಾಟ ಕವಿಚೂತವನ ಚೈತ್ರ, ಉಪಮಾಲೋಲ.
ಸಾಹಿತ್ಯಪ್ರಕಾರ: ಕಾವ್ಯ
ಛಂದೋರೂಪ: ವಾರ್ಧಕ ಷಟ್ಪದಿ.
ಹಸ್ತಪ್ರತಿಗಳು: ಓಲೆಯ ಗರಿ ಮತ್ತು ಕಾಗದ
ಪ್ರಕಟವಾದ ವರ್ಷ: 1848, (ಕಲ್ಲಚ್ಚಿನ ಪ್ರತಿ), 1875, ವ್ಯಾಖ್ಯಾನಸಹಿತವಾಗಿ (ಕಲ್ಲಚ್ಚಿನ ಪ್ರತಿ)
ಸಂಪಾದಕರು: ವೆಂಕಟ ರಂಗೋ ಕಟ್ಟಿ (1875)(ಕಲ್ಲಚ್ಚಿನ ಪ್ರತಿ), ಹೊಳಕಲ್ ಶ್ರೀನಿವಾಸ ಪಂಡಿತ, 1875, ಮುದ್ರಿತ ಪ್ರತಿ.
ಪ್ರಕಾಶಕರು: ಕೃಷ್ಣರಾಜ ಮುದ್ರಾಕ್ಷರ ಶಾಲೆ, ಮೈಸೂರು.

ಕಿರು ಪರಿಚಯ: ಹತ್ತೊಂಬತ್ತನೆಯ ಶತಮಾನ ಮತ್ತು ಇಪ್ಪತ್ತನೆಯ ಶತಮಾನದ ಪೂರ್ವಾರ್ಧದಲ್ಲಿ ಜೈಮಿನಿ ಭಾರತವು ಕನ್ನಡದ ಅತ್ಯಂತ ಜನಪ್ರಿಯ ಕಾವ್ಯಗಳಲ್ಲಿ ಒಂದಾಗಿತ್ತು. ಗಮಕ ಪರಂಪರೆಯ ನೆರವಿನಿಂದ ಹಳ್ಳಹಳ್ಳಿಗಳಲ್ಲಿಯೂ ಪ್ರಚುರವಾಗಿದ್ದ ಈ ಕಾವ್ಯದ ಅನೇಕ ಸನ್ನಿವೇಶಗಳು ನಾಟಕರೂಪವನ್ನೂ ಪಡೆಯುತ್ತಿದ್ದವು. ಜೈಮಿನಿ ಭಾರತವು, ಸಂಸ್ಕೃತದಲ್ಲಿ ಜೈಮಿನಿ ಎಂಬ ಋಷಿಯಿಂದ ರಚಿತವಾದ ಕಾವ್ಯ. ಲಕ್ಷ್ಮೀಶನ ಕಾವ್ಯವು ಯಾವುದೇ ಅರ್ಥದಲ್ಲಿಯೂ ಮೂಲದ ಕನ್ನಡ ಅನುವಾದವಲ್ಲ. ಕವಿಯು ತನಗಿರುವ ಸ್ವಾತಂತ್ರ್ಯವನ್ನು ಉಪಯೋಗಿಸಿ ಅನೇಕ ನೀರಸವಾದ ಭಾಗಗಳನ್ನು ಬಿಟ್ಟಿದ್ದಾನೆ ಮತ್ತು ತನ್ನದೇ ಆದ ಹೊಸ ಾಯಾಮಗಳನ್ನು ಸೇರಿಸಿದ್ದಾನೆ. ಈ ಕಾವ್ಯದಲ್ಲಿ 34 ಅಧ್ಯಾಯಗಳಿದ್ದು ವಾರ್ಧಕ ಷಟ್ಪದಿಯಲ್ಲಿರುವ 1936 ಪದ್ಯಗಳಿವೆ. ಈ ಕಾವ್ಯವು, ಮಹಾಭಾರತ ಯುದ್ಧವು ಮುಗಿದು, ಧರ್ಮರಾಯನ ಪಟ್ಟಾಭಿಷೇಕವಾದ ನಂತರದ ಘಟನೆಗಳ ಮೇಲೆ ಒತ್ತು ಕೊಟ್ಟಿದೆ. ಇದು ವ್ಯಾಸಭಾರತದ ಅಶ್ವಮೇಧಿಕಪರ್ವದಲ್ಲಿ ಬರುವ ಕಥಾಭಾಗ. ಕೃಷ್ಣನ ದೈವಿಕತೆಯನ್ನು ಖಚಿತವಾಗಿ ಸ್ಥಾಪಿಸುವ ಮತ್ತು ಅರ್ಜುನನಂತಹ ಉದ್ಧಟ ವೀರರಿಗೆ ವಿನಯದ ಪಾಠ ಕಲಿಸುವ ತನ್ನ ಉದ್ದೇಶದಲ್ಲಿ ಕವಿಯು ಯಶಸ್ಸು ಪಡೆದಿದ್ದಾನೆ. ಅಶ್ವಮೇಧಯಾಗವನ್ನು ಮಾಡಬೇಕೆಂಬ ಧರ್ಮರಾಯನ ತೀರ್ಮಾನ ಮತ್ತು ಅದರ ಪೂರ್ವಸಿದ್ಧತೆ, ಪರಿಣಾಮಗಳನ್ನು ಬಹಳ ವಿವರವಾಗಿ ನಿರೂಪಿಸಲಾಗಿದೆ. ಅರ್ಜುನನು ತನಗಿಂತಲೂ ಎಷ್ಟೋ ಪಟ್ಟು ಬಲಶಾಲಿಗಳಾದ, ಆದರೆ ಕೃಷ್ಣನ ಬಗ್ಗೆ ಪ್ರಶ್ನಾತೀತವಾದ ಗೌರವವನ್ನು ಹೊಂದಿರುವ ಅನೇಕ ವೀರರನ್ನು ಅರ್ಜುನನು ಭೇಟಿಯಾಗುತ್ತಾನೆ. ಸುಧನ್ವ, ಹಂಸಧ್ವಜ, ಯೌವನಾಶ್ವ ಮುಂತಾದ ಅನೇಕ ವೀರರು ಅರ್ಜುನನನ್ನು ಸೋಲಿನ ಅಂಚಿಗೆ ತರುತ್ತಾರೆ. ಆದರೆ, ಎಲ್ಲ ಸಂದರ್ಭಗಳಲ್ಲಿಯೂ ಅವನು ಕೃಷ್ಣನ ಅನುಗ್ರಹದಿಂದ ಗೆಲುವು ಪಡೆಯುತ್ತಾನೆ ಮತ್ತು ಮರೆಯಲಾಗದ ಪಾಠವನ್ನು ಕಲಿಯುತ್ತಾನೆ. ಆದ್ದರಿಂದ ಜೈಮಿನಿ ಭಾರತವು ಪರಾಕ್ರಮವನ್ನು ಹಿನ್ನೆಲೆಗೆ ಸರಿಸಿ, ಭಕ್ತಿಯನ್ನು ಮುಂದೆಮಾಡುವ ಭಕ್ತಿಯುಗದ ಉತ್ಪನ್ನವೆಂದರೂ ತಪ್ಪಿಲ್ಲ.
         ಆದರೆ, ಲಕ್ಷ್ಮೀಶನ ಕೃತಿಯ ಜನಪ್ರಿಯತೆಗೆ, ತನ್ನ ಕಾವ್ಯವಸ್ತುವಿನ ನಿರ್ವಹಣೆಯಲ್ಲಿ ಕವಿಯು ತೋರಿಸಿರುವ ಅನುಪಮವಾದ ಕುಶಲತೆಯೇ ಕಾರಣ. ವಾಸ್ತವವಾಗಿ ಜೈಮಿನಿ ಭಾರತವು ಸ್ವತಂತ್ರವಾದ ಕಥೆಗಳ ಗೊಂಚಲು. ಯಾಗದ ಕುದುರೆಯ ಹಿಂದೆ ಚಲಿಸುತ್ತಾ ಲೋಕಪರ್ಯಟನೆ ಮಾಡುವ ಅರ್ಜುನನು ಈ ಕಥೆಗಳನ್ನು ಪೋಣಿಸುವ ದಾರ. ಆದರೆ, ಈ ಕಾವ್ಯದ್ದು, ಬಿಡುಬೀಸಾಗಿ ಚಲಿಸುವ ನಿಧಾನಗತಿಯೇ ವಿನಾ ಯುದ್ಧಕಾತರವಾದ ನಾಗಾಲೋಟವಲ್ಲ. ಲಕ್ಷ್ಮೀಶನಿಗೆ ನಿರೂಪಣೆಯ ಕೌಶಲ್ಯ ಮತ್ತು ಭಾಷೆಯ ಮೇಲಿನ ಪ್ರಭುತ್ವಗಳೆರಡೂ ಇವೆ. ಅವನು ನಿಸರ್ಗಸೌಂದರ್ಯವನ್ನು ಗುರುತಿಸಬಲ್ಲ. ಅಂತೆಯೇ ಮನುಷ್ಯಸ್ವಭಾವದ ಆಳವಾದ ಪರಿಚಯವೂ ಅವನಿಗಿದೆ. ಈ ಕಾವ್ಯದಲ್ಲಿ ಬರುವ ಸೀತಾಪರಿತ್ಯಾಗದ ಹೃದಯಸ್ಪರ್ಶಿಯಾಗಿದ್ದು, ಸರಿಯಾಗಿ ವ್ಯಾಖ್ಯಾನ ಮಾಡಿದಾಗ ಅದು ಸ್ತ್ರೀವಾದೀ ಆಯಾಮಗಳನ್ನು ಪಡೆಯಬಲ್ಲುದು. ಚಂಡಿ-ಉದ್ಧಾಲಕರ ಪ್ರಸಂಗದಲ್ಲಿ ಲಕ್ಷ್ಮೀಶನ ಹಾಸ್ಯಪ್ರಜ್ಞೆಯು ಪ್ರಖರವಾಗಿ ಕಂಡುಬರುತ್ತದೆ. ಚಂದ್ರಹಾಸನ ಕಥೆಯು ಕನ್ನಡ ಓದುಗರಿಗೆ ಪ್ರಿಯವಾದ ಇನ್ನೊಂದು ಸಂದರ್ಭ. ಕವಿಯು ತನ್ನ ಕಾವ್ಯದಲ್ಲಿ ವೀರ, ಶೃಂಗಾರ, ಕರುಣ, ಹಾಸ್ಯ ಮುಂತಾದ ರಸಗಳನ್ನು ಅಂತೆಯೇ ಭಕ್ತಿಯಂತಹ ಭಾವನೆಗಳನ್ನು ನಿರೂಪಿಸುವ ಅವಕಾಶಗಳನ್ನು ಸೃಷ್ಟಿಸಿಕೊಳ್ಳುತ್ತಾನೆ ಮತ್ತು ಅವುಗಳನ್ನು ಸಮರ್ಥವಾಗಿ ನಿರ್ವಹಿಸುತ್ತಾನೆ. ಈ ಕವಿಯ ಪ್ರತಿಭೆಯು ಅವನು ಬಳಸುವ ಉಪಮೆಗಳಲ್ಲಿ ಹಾಗೂ ಸಂಗೀತಕ್ಕೆ ಸಮೀಪವೆನ್ನುವಷ್ಟು ಮಧುರವಾದ ಭಾಷೆಯ ಬಳಕೆಯಲ್ಲಿ ನಿರ್ದಿಷ್ಟವಾಗಿ ಕಾಣಿಸಿಕೊಳ್ಳುತ್ತದೆ. ಅವನನ್ನು ‘ಉಪಮಾಲೋಲ’, ‘ನಾದಲೋಲ’ ಎಂದೇ ಕರೆಯಲಾಗಿದೆ. ಕನ್ನಡದ ಶ್ರೇಷ್ಠ ವಿಮರ್ಶಕರಾದ ಕುವೆಂಪು, ಬೇಂದ್ರೆ, ಮಾಸ್ತಿ, ಕುರ್ತಕೋಟಿ, ಚಿ.ಎನ್. ರಾಮಚಂದ್ರನ್ ಅವರು ಲಕ್ಷ್ಮೀಶನ ಬಗ್ಗೆ ವಿವರವಾದ ಮತ್ತು ಒಳನೋಟಗಳಿಂದ ಕೂಡಿದ ವಿಮರ್ಶೆಯನ್ನು ಮಾಡಿದ್ದಾರೆ.






********ಕೃಪೆ:ವಿಕಿಪೀಡಿಯಾ ಮತ್ತು ಹುಳಿಯಾರು ಸುದ್ಧಿ*********