ನನ್ನ ಪುಟಗಳು

14 ಅಕ್ಟೋಬರ್ 2019

ಹೂವಾದ ಹುಡುಗಿ - ಗದ್ಯ-5 (8th-Prose-Hoovada_Hudugi)

ಹೂವಾದ ಹುಡುಗಿ
Related image
ಎ. ಕೆ. ರಾಮಾನುಜನ್

        ವಿಶ್ವಮಾನ್ಯ ಕವಿ, ಚಿಂತಕ, ಪ್ರಾಧ್ಯಾಪಕ, ಜನಪದ ತಜ್ಞ, ಶ್ರೇಷ್ಠ ಭಾಷಾ ತಜ್ಞ, ಭಾಷಾಂತರಕಾರ ಹೀಗೆ ವಿವಿಧ ಪ್ರತಿಭೆಗಳ ಮಹೋನ್ನತ ಸಂಗಮರಾದ ಅತ್ತಿಪಟ್ ಕೃಷ್ಣಸ್ವಾಮಿ ರಾಮಾನುಜನ್ ಅವರು ಮಾರ್ಚ್ ೧೬, ೧೯೨೯ರಲ್ಲಿ ಮೈಸೂರಿನಲ್ಲಿ ಜನಿಸಿದರು. ರಾಮಾನುಜನ್ ಅವರು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಹತ್ವದ ಕೊಡುಗೆಗಳನ್ನು ಕೊಡುವುದರ ಜೊತೆಗೆ ಜೊತೆಗೆ ಕನ್ನಡದ ಕಸ್ತೂರಿಯನ್ನು ವಿಶ್ವದೆಲ್ಲೆಡೆ ಇಂಗ್ಲಿಷ್ ಭಾಷೆಯ ಮೂಲಕ ಪಸರಿಸುವ ಮನೋಜ್ಞ ಕಾರ್ಯ ಮಾಡಿದರು. ಈ ನಿಟ್ಟಿನಲ್ಲಿ ಅವರು ಇಂಗ್ಲಿಷಿನಲ್ಲಿ ಮೂಡಿಸಿದ ಬಸವಣ್ಣನವರ ‘ಉಳ್ಳವರು ಶಿವಾಲಯವ ಮಾಡುವರು’ ವಚನದ ಕನ್ನಡದ ಭಾಷಾಂತರ ಇಲ್ಲಿ ನೆನಪಾಗುತ್ತದೆ. ಈ ಭಾಷಾಂತರ ಅಸಾಧಾರಣವಾಗಿದೆ, ಶ್ರೇಷ್ಠವಾಗಿದೆ ಎಂಬುದು ವಿದ್ವಾಂಸರ ಅಭಿಪ್ರಾಯ.
           ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎ.ಮತ್ತು ಎಂ.ಎ.ಪದವಿಯನ್ನು ಗಳಿಸಿದ ರಾಮಾನುಜನ್ ಅವರು ದಕ್ಷಿಣ ಭಾರತದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿ, 1958ರ ವರ್ಷದಲ್ಲಿ ಪುಣೆಯ ಡೆಕ್ಕನ್ ವಿಶ್ವವಿದ್ಯಾಲಯದಿಂದ ‘ಥಿಯೇಟ್ರಿಕಲ್ ಲಿಂಗ್ವಿಸ್ಟಿಕ್ಸ್’ ವಿಷಯದಲ್ಲಿ ಉನ್ನತ ಡಿಪ್ಲೋಮಾ ಪದವಿ ಪಡೆದರು. ಮುಂದಿನ ವರ್ಷದಲ್ಲಿ ಅಮೆರಿಕಕ್ಕೆ ತೆರಳಿದ ರಾಮಾನುಜನ್ 1963ರ ವರ್ಷದಲ್ಲಿ ಅಮೆರಿಕ ಇಂಡಿಯಾನ ವಿಶ್ವವಿದ್ಯಾನಿಲಯದಿಂದ ಭಾಷಾವಿಜ್ಞಾನದ ಪಿ.ಎಚ್.ಡಿ ಗೌರವವನ್ನು ಗಳಿಸಿದರು. 
           ೧೯೬೨ರಲ್ಲಿ ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಭಾಷಾವಿಜ್ಞಾನ ಹಾಗೂ ದ್ರಾವಿಡ ಅಧ್ಯಯನದ ಅಧ್ಯಾಪಕರಾಗಿ ಸೇರಿದ ರಾಮಾನುಜನ್ ೧೯೯೩ರಲ್ಲಿ ನಿಧನರಾಗುವತನಕದ ತಮ್ಮ ಬಹುತೇಕ ವೃತ್ತಿ ಜೀವನವನ್ನು ಅಲ್ಲಿಯೇ ನಡೆಸಿದರು. ಜೊತೆಗೆ ವಿಸ್ಕಾಸಿನ್, ಬರ್ಕಲಿ, ಮಿಚಿಗನ್ ಮುಂತಾದ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾದ್ಯಾಪಕರಾಗಿದ್ದರು. ಚಿಕಾಗೋ ವಿಶ್ವವಿದ್ಯಾಲಯದಲ್ಲಿ ದಕ್ಷಿಣ ಏಷ್ಯಾ ಭಾಷೆಗಳ ಅಧ್ಯಯನ ಪೀಠ ಸ್ಥಾಪನೆ ಮಾಡಿದ ಕೀರ್ತಿ ಎ. ಕೆ. ರಾಮಾನುಜನ್ ಅವರಿಗೆ ಸಲ್ಲುತ್ತದೆಪ್ರಸಿದ್ದ ನವ್ಯ ಕವಿ ಗೋಪಾಲಕೃಷ್ಣ ಅಡಿಗರ ಪ್ರಭಾವದಿಂದ ಹೊರಬಂದು ಹೊಸ ಸಂವೇದನೆಗಳೊಂದಿಗೆ ತಮ್ಮದೇ ಆದ ರೀತಿಯಲ್ಲಿ ಕಾವ್ಯ ರಚಸಿದ ರಾಮಾನುಜನ್ ಅವರು ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ಹೊಕ್ಕುಳಲ್ಲಿ ಹೂವಿಲ್ಲ’ (೧೯೬೯) ಇವರ ಪ್ರಥಮ ಸಂಕಲನ. ಪದ್ಯ ರಚನೆ, ಭಾಷಾ ಬಳಕೆ, ಪ್ರತಿಮೆಗಳ ಬಳಕೆ- ಈ ದೃಷ್ಟಿಯಿಂದ ಇವರ ನವ್ಯ ಕವನಗಳಿಗೆ ನವ್ಯ ಸಾಹಿತ್ಯದಲ್ಲಿ ಪ್ರತ್ಯೇಕಸ್ಥಾನ ಸಲ್ಲುತ್ತದೆ. . 
ಪ್ರಮುಖ ಕೃತಿಗಳು:
ಕವನ ಸಂಕಲನಗಳು
  • ಹೊಕ್ಕುಳಲ್ಲಿ ಹೂವಿಲ್ಲ
  • ಮತ್ತು ಇತರ ಕವಿತೆಗಳು
ಕಾದಂಬರಿಗಳು:
  • ಕುಂಟೋಬಿಲ್ಲೆ
  • ಮತ್ತೊಬ್ಬನ ಆತ್ಮಚರಿತ್ರೆ
ಇಂಗ್ಲಿಷ್ ಸಾಹಿತ್ಯ:
  • ಸ್ಪಿಕೀಂಗ್ ಆಫ್ ಶಿವ- ವಚನಗಳ ಇಂಗ್ಲೀಷ್ ಅನುವಾದ
  • ಸಂಸ್ಕಾರ-ಸಂಸ್ಕಾರ ಕಾದಂಬರಿಯ ಇಂಗ್ಲಿಷ್ ಅನುವಾದ
  • ‘Is There an Indian Way of Thinking?’ (೧೯೯೦)
  • ‘Where Mirrors Are Windows: Toward an Anthology of Reflections’ (೧೯೮೯)
  • ‘The Interior Landscape: Love Poems from a Classical Tamil Anthology’ (೧೯೬೭)
  • ‘Folktales from India’, ‘Oral Tales from Twenty Indian Languages (೧೯೯೧)’
  • ‘Sociolinguistic Variation and Language Change’
  • ‘When God Is a Customer: Telugu Courtesan Songs by Ksetrayya and Others (with Velcheru Narayana Rao and David Shulman)’ 1994,
  • ‘A Flowering Tree and Other Oral Tales from India, ೧೯೯೭ ಮತ್ತು
  • ಅವರ ನಿಧನಾನಂತರದಲ್ಲಿ ಪ್ರಕಟವಾದ ‘Poems of A. K. Ramanujan’
ಪ್ರಶಸ್ತಿ-ಪುರಸ್ಕಾರಗಳು:
  ರಾಮಾನುಜನ್‌ರ ಇಂತಹ ಬಹುಮುಖ ಸೇವೆಯನ್ನು ಗಮನಿಸಿದ ಭಾರತಸರ್ಕಾರ 1976ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತು. 1983ರಲ್ಲಿ ಅವರಿಗೆ ಪ್ರಸಿದ್ಧ ಮ್ಯಾಕ್ ಆರ್ಥರ್ ಫೆಲ್ಲೋಷಿಪ್ ಗೌರವ ಅರ್ಪಿತವಾಯಿತು. 
**************
ಹೂವಾದ ಹುಡುಗಿ ಜಾನಪದ ಕಥೆಯ ಚಿತ್ರಗಳು:




*************