ನನ್ನ ಪುಟಗಳು

12 ನವೆಂಬರ್ 2020

10ನೇ ತರಗತಿ-ಕನ್ನಡ-ಗದ್ಯ-02-ಲಂಡನ್ ನಗರ- ಭಾಷಾ ಚಟುವಟಿಕೆ

1. ಕೊಟ್ಟಿರುವ ಸೂಚನೆಯಂತೆ ಉತ್ತರಿಸಿ. 
    ೧. ವೆಸ್ಟ್‌ಮಿನ್‌ಸ್ಟರ್ ಅಬೆ ನೋಡಿಕೊಂಡು ಬಂದೆವು. (ಭವಿಷ್ಯತ್‌ಕಾಲಕ್ಕೆ ಪರಿವರ್ತಿಸಿ) 
    ಉತ್ತರ: ವೆಸ್ಟ್‌ಮಿನ್‌ಸ್ಟರ್ ಅಬೆ ನೋಡಿಕೊಂಡು ಬರುವೆವು.
   
 ೨. ಶೈಕ್ಷಣಿಕ ಅಧ್ಯಯನ ದೃಷ್ಟಿಯಿಂದ ಶೈಕ್ಷಣಿಕ ಪ್ರವಾಸ ಮಾಡುವರು. (ವರ್ತಮಾನಕಾಲಕ್ಕೆ ಪರಿವರ್ತಿಸಿ) 
    ಉತ್ತರ: ಶೈಕ್ಷಣಿಕ ಅಧ್ಯಯನ ದೃಷ್ಟಿಯಿಂದ ಶೈಕ್ಷಣಿಕ ಪ್ರವಾಸ ಮಾಡುತ್ತಾರೆ.
    
೩. ಹೆಜ್ಜೆ ಹೆಜ್ಜೆಗೆ ಇತಿಹಾಸದ ಅಡಿಗಲ್ಲುಗಳು ದೊರೆಯುತ್ತವೆ. (ಭೂತಕಾಲಕ್ಕೆ ಪರಿವರ್ತಿಸಿ)
    ಉತ್ತರ: ಹೆಜ್ಜೆ ಹೆಜ್ಜೆಗೆ ಇತಿಹಾಸದ ಅಡಿಗಲ್ಲುಗಳು ದೊರೆತವು.
 
2. ಈ ಗಾದೆ ಮಾತುಗಳನ್ನು ವಿಸ್ತರಿಸಿ ಬರೆಯಿರಿ. 
    ೧. ಕುಳಿತು ಉಣ್ಣುವವನಿಗೆ ಕುಡಿಕೆ ಹೊನ್ನು ಸಾಲದು / ಕೈ ಕೆಸರಾದರೆ ಬಾಯಿ ಮೊಸರು / ದುಡಿಮೆಯೇ ದುಡ್ಡಿನ ತಾಯಿ

* ಗಾದೆಗಳು ವೇದಗಳಿಗೆ ಸಮ, ಗಾದೆಗಳು ಹಿರಿಯರ ಅನುಭವದ ಮಾತುಗಳಾಗಿವೆ.

* ಇದು ಒಂದು ಜನಪ್ರಿಯ ಗಾದೆ ಮಾತಾಗಿದ್ದು; ದುಡಿಮೆ ಅಥವಾ ದೈಹಿಕ ಶ್ರಮ ಹಾಗೂ ಅದರ ಮಹತ್ವವೇನು ಎಂಬುದನ್ನು ತಿಳಿಸುತ್ತದೆ.

* ಹನ್ನೆರಡನೆಯ ಶತಮಾನದಲ್ಲೇ ಶಿವಶರಣರು ’ಕಾಯಕವೇ ಕೈಲಾಸ’, ಎಂದು ದುಡಿಮೆಯ ಮಹತ್ವವನ್ನು ಸಾರಿದರು. ಕಾಯಕ ಎಂದರೆ ’ಪ್ರತಿಯೊಬ್ಬ ವ್ಯಕ್ತಿಯು ಏನಾದರೊಂದು ದೈಹಿಕ ಶ್ರಮದ ಮೂಲಕ ಸಂಪಾದನೆ ಮಾಡಿ ಜೀವನ ನಡೆಸಬೇಕು’ ಸೋಮಾರಿಯಾಗಿ ಕಾಲಕಳೆಯದೆ ಕಷ್ಟಪಟ್ಟು ದುಡಿದು ಬದುಕುವುದರಿಂದ ಹಣ ಸಂಪಾದನೆ ಸಾಧ್ಯ. ಕೂತು ಉಣ್ಣುವವನಿಗೆ ಕುಡುಕೆ ಹೊನ್ನೂ ಸಾಲದು ಎಂಬಂತೆ ಇರುವ ಆಸ್ತಿ ಕರಗಿದ ಮೇಲೆ ಕಷ್ಟ ಪಡಬೇಕಾಗುತ್ತದೆ. ಆದ್ದರಿಂದ ಕಷ್ಟಪಟ್ಟರೆ ಸುಖವಿದೆ ಎಂಬುದು ಈ ಗಾದೆಯ ಆಶಯವಾಗಿದೆ.

’ದುಡಿಮೆಯೇ ದುಡ್ಡಿನ ತಾಯಿ’, ’ಕಾಯಕವೇ ಕೈಲಾಸ’, ’ಆಳಾಗಬಲ್ಲವನು ಆಳುವನು ಅರಸಾಗಿ’ ಮುಂತಾದವು ಇದೇ ಅರ್ಥ ಕೊಡುವ ಗಾದೆ ಮಾತುಗಳಾಗಿವೆ.

    ೨. ಕಟ್ಟುವುದು ಕಠಿಣ; ಕೆಡಹುವುದು ಸುಲಭ / ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ

* ಗಾದೆಗಳು ವೇದಗಳಿಗೆ ಸಮ, ಗಾದೆಗಳು ಹಿರಿಯರ ಅನುಭವದ ಮಾತುಗಳಾಗಿವೆ.

* ಇದು ಒಂದು ಜನಪ್ರಿಯ ಗಾದೆ ಮಾತಾಗಿದ್ದು; ’ಯಾವುದೇ ಕೆಲಸದಲ್ಲಾದರೂ ಯಶಸ್ಸು ಗಳಿಸಬೇಕಾದರೆ ಕಷ್ಟಪಡಬೇಕು. ಆದರೆ ಹಾಳು ಮಾಡಲು ಕಷ್ಟ ಪಡಬೇಕಾಗಿಲ್ಲ’ ಎಂಬುದನ್ನು ತಿಳಿಸುತ್ತದೆ. 

ಒಬ್ಬ ಕುಂಬಾರ ಮಡಕೆಗಳನ್ನು ಮಾಡಲು ಕೆರೆಯಿಂದ ಮಣ್ಣು ಹೊತ್ತು ತಂದು, ಅದರಲ್ಲಿರುವ ಕಲ್ಲು, ಕಸ-ಕಡ್ಡಿಗಳನ್ನು ತೆಗೆದು, ಮಣ್ಣನ್ನು ತುಳಿದು ಹದಮಾಡಿ; ತಿಗರಿಗೆ ಹಾಕಿ ತಿರುಗಿಸಿ, ಮಡಿಕೆಯ ಆಕಾರವನ್ನು ನೀಡಿ, ಅದನ್ನು ತಟ್ಟಿ ಸರಿಪಡಿಸಿ, ಬೇಯಿಸಿ ಹೀಗೆ ಬಹಳ ಕಷ್ಟಪಟ್ಟು ಮಡಿಕೆಯನ್ನು ಮಾಡುತ್ತಾನೆ. ಆದರೆ ಆ ಮಡಿಕೆಯನ್ನು ಒಡೆಯಲು ಒಂದು ದೊಣ್ಣೆ ಪೆಟ್ಟು ಸಾಕು. 

ಯಾವುದೇ ಕಟ್ಟಡ ನಿರ್ಮಾಣ ಮಾಡಲು, ಒಂದು ಒಳ್ಳೆಯ ಸಂಸ್ಥೆಯನ್ನು ಸ್ಥಾಪಿಸಲು ಬಹಳ ಶ್ರಮಬೇಕು. ಆದರೆ ಹಾಳುಮಾಡುವುದಕ್ಕೆ ಕಷ್ಟಪಡಬೇಕಿಲ್ಲ. ಹಾಗೆಯೇ ನಾವು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು, ಒಳ್ಳೆಯ ಹೆಸರು ಸಂಪಾದಿಸಲು ಬಹಳ ಶ್ರಮಿಸಬೇಕು. ಆದರೆ ಅದನ್ನು ಹಾಳುಮಾಡಿಕೊಳ್ಳಲು ಕ್ಷಣಕಾಲ ಸಾಕು. ಆದ್ದರಿಂದ, ನಾವು ಏನನ್ನಾದರೂ ಹಾಳುಮಾಡುವ ಮೊದಲು ಅದರ ಹಿಂದಿರುವ ಪರಿಶ್ರಮವನ್ನು ಅರ್ಥಮಾಡಿಕೊಳ್ಳಬೇಕು. ಎಂಬುದು ಈ ಗಾದೆಯ ಆಶಯವಾಗಿದೆ.

(ಹೆಚ್ಚಿನ ಗಾದೆ ವಿಸ್ತರಣೆಗಳನ್ನು ಓದಲು "ಇಲ್ಲಿ ಕ್ಲಿಕ್‌ಮಾಡಿ")

 
3. ಈ ವಿಷಯಗಳಿಗೆ ಪ್ರಬಂಧ ಬರೆಯಿರಿ.
೧. ಸ್ವಚ್ಛಭಾರತ ಅಭಿಯಾನ
೨. ಪ್ರಾಚ್ಯ ಸ್ಮಾರಕಗಳ ಸಂರಕ್ಷಣೆ
೩. ರಾಷ್ಟ್ರೀಯ ಭಾವೈಕ್ಯ
(ಶೀಘ್ರದಲ್ಲೇ ಪ್ರಕಟಿಸಲಾಗುವುದು)

*************
***********








4 ಕಾಮೆಂಟ್‌ಗಳು: