ಎ. ಎನ್. ಮೂರ್ತಿರಾವ್ ಅವರ ಪರಿಚಯ
ಪರೀಕ್ಷಾ ದೃಷ್ಟಿಯಿಂದ ಕಿರು ಪರಿಚಯ:
        ಎ.ಎನ್. ಮೂರ್ತಿರಾವ್ ಕ್ರಿ.ಶ.೧೯೦೦ ರಲ್ಲಿ  ಮಂಡ್ಯಜಿಲ್ಲೆಯ ಅಕ್ಕಿಹೆಬ್ಬಾಳಿನಲ್ಲಿ ಜನಿಸಿದರು. ಇವರ ಪೂರ್ಣಹೆಸರು ಅಕ್ಕಿಹೆಬ್ಬಾಳು ನರಸಿಂಹ ಮೂರ್ತಿರಾವ್. 
        ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್  ಪ್ರಾಧ್ಯಾಪಕರಾಗಿ, ಆಕಾಶವಾಣಿಯ ಸಹಾಯಕ ನಿರ್ದೇಶಕರಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದಾರೆ. 
       ಇವರು-  ಹಗಲುಗನಸುಗಳು. ಅಲೆಯುವ ಮನ, ಅಪರವಯಸ್ಕನ ಅಮೆರಿಕಾಯಾತ್ರೆ, ಮಿನುಗು-ಮಿಂಚು, ಪೂರ್ವಸೂರಿಗಳೊಡನೆ, ಚಂಡಮಾರುತ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. 
       ಇವರಿಗೆ,  ಚಿತ್ರಗಳು- ಪತ್ರಗಳು ಎಂಬ ಕೃತಿಗೆ ಕೇಂದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದೇವರು ಎಂಬ ಕೃತಿಗೆ ಪಂಪ ಪ್ರಶಸ್ತಿ ಲಭಿಸಿದೆ. ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಿ.ಲಿಟ್. ಪದವಿ ನೀಡಿದೆ. 
        ಇವರು ೧೯೮೪ರಲ್ಲಿ ಕೈವಾರದಲ್ಲಿ ಸಮಾವೇಶಗೊಂಡ ೫೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 
**********
ಎ. ಎನ್. ಮೂರ್ತಿರಾವ್ ಅವರ ಬಗ್ಗೆ ಹೆಚ್ಚಿನ ಮಾಹಿತಿ

 ಡಾ. ಎ.ಎನ್.ಮೂರ್ತಿ ರಾವ್ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾಯರು)
(ಜನನ: ಜೂನ್. ೧೬, ೧೯೦೦       ನಿಧನ: ೨೪ ಆಗಸ್ಟ್ ೨೦೦೫ 
 ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಬರಿಯ ಶತಾಯುಷಿಯಷ್ಟೇ ಅಲ್ಲದೇ, ಮೂರು
ಶತಮಾನಗಳಲ್ಲಿ ( ೧೯,೨೦,೨೧ನೆಯ ಶತಮಾನಗಳು) ಬದುಕಿದ ಅತ್ಯಂತ ಅಪರೂಪದ ವ್ಯಕ್ತಿ.
ಮಂಡ್ಯ ಜಿಲ್ಲೆಯ "ಅಕ್ಕಿಹೆಬ್ಬಾಳು" ಅವರ ಜನ್ಮಸ್ಥಳ.
ತಂದೆ-ತಾಯಿಗಳು : ಶ್ರೀಮತಿ ಪುಟ್ಟಮ್ಮ, ಮತ್ತು ತಂದೆಯವರು, ಶ್ರೀ ಎ. ಸುಬ್ಬರಾವ್.
ಹೆಂಡತಿ- ಶ್ರೀಮತಿ ಜಯಲಕ್ಷ್ಮಿ, (ಮೂರ್ತಿರಾಯರ ರಚನೆಗಳಲ್ಲಿ 'ಲಲಿತೆ,' ಯೆಂದು ಸಂಬೋಧಿಸಲ್ಪಡುತ್ತಾರೆ.)
ಮಕ್ಕಳು : ೧. ಎ. ಎನ್. ಸುಬ್ಬರಾಮಯ್ಯ,೨. ಎ. ಎನ್. ನಾಗರಾಜ್,೩. ಎ. ಎನ್ ರಾಮಚಂದ್ರರಾವ್.
ವಿದ್ಯಾಭ್ಯಾಸ :
ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲುಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಎಂ. ಎ ; (ಇಂಗ್ಲೀಷ್ ಸಾಹಿತ್ಯದಲ್ಲಿ).
ವೃತ್ತಿ :
೧. ಮೈಸೂರಿನ ಮಹಾರಾಜಾ ಹೈಸ್ಕೂಲಿನಲ್ಲಿ ಉಪಾಧ್ಯಾಯವೃತ್ತಿ- ೧೯೨೫-೧೯೨೭ ೨. ಮೈಸೂರಿನ
ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕ-೧೯೨೭-೧೯೪೦ ೩. ಶಿವಮೊಗ್ಗದ ಇಂಟರ್ಮೀಡಿಯೆಟ್
ಕಾಲೇಜಿನಲ್ಲಿ ಉಪಪ್ರಾಧ್ಯಾಪಕ-೧೯೪೦-೧೯೪೩.
ಗೌರವಕೆಲಸಗಳು :
೧. ಕಾರ್ಯದರ್ಶಿ, ಕನ್ನಡಸಾಹಿತ್ಯ ಪರಿಷತ್ತು-೧೯೫೪ ೨. ಅಧ್ಯಕ್ಷ, ಕನ್ನಡ ಸಾಹಿತ್ಯ
ಪರಿಷತ್ತು-೧೯೫೪-೫೬ ೩. ಕೇಂದ್ರ ಸಾಹಿತ್ಯ ಅಕ್ಯಾಡಮಿಯ ಕನ್ನಡ ಸಲಹ ಸಮಿತಿಯ ಕನ್ವೀನರ್
ಛೇರ್ಮನ್ ೪. ದಕ್ಷಿಣ ಭಾಷಾ ಪುಸ್ತಕ ಟ್ರಸ್ಟ್ ನ ಕನ್ನಡ ಕನ್ವೀನರ್- ಛೇರ್ಮನ್ ೫.
ಭಾರತೀಯ ಆಕಾಶ್ ವಾಣಿ ಯ 'ಕೇಂದ್ರೀಯ ಕಾರ್ಯಕ್ರಮಗಳ ಸಲಹಾಕಮಿಟಿ', ಯ ಸದಸ್ಯರಾಗಿ ೪
ವರ್ಷಗಳಕಾಲ ಸೇವೆ.
ಪ್ರಬಂಧಗಳ ಮೂಲಕ ಇವರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೧೯೩೭ರಲ್ಲಿ ಇವರ ಮೊದಲ ಕೃತಿ
"ಹೂವುಗಳು"(ಪ್ರಬಂಧ ಸಂಕಲನ) ಪ್ರಕಟವಾಯಿತು. ಎಂಟು ಪ್ರಬಂಧಗಳ ಈ ಸಂಕಲನವು ಇಂದಿಗೂ
ಒಂದು ಮಾದರಿ ಕೃತಿಯಾಗಿದೆ. ವೈಚಾರಿಕ ನಾಸ್ತಿಕವಾದಿಯಾದ ರಾಯರ "ದೇವರು" ಎಂಬ ಕೃತಿಯು ಆಂಗ್ಲ ಭಾಷೆಗೆ ತರ್ಜುಮೆಯಾಗಿ ವಿಶ್ವಪ್ರಸಿಧ್ಧವಾಗಿದೆ.
ಅನುವಾದಗಳು :
·       ಸಾಕ್ರೆಟೀಸನ ಕೊನೆಯ ದಿನಗಳು ( ಪ್ಲೇಟೋನ 'Enthyphro','Crito',Apology',Phaedo' - ಸಂವಾದಗಳ ಅನುವಾದ)
·       ಹವಳದ ದ್ವೀಪ ( ಆರ.ಎಂ.ಬ್ಯಾಲಂಟಯಿನ್ ನ 'The Coral Island' ನ ಸಂಗ್ರಹಾನುವಾದ)
·       ಯೋಧನ ಪುನರಾಗಮನ ( ಅನುವಾದಿತ ಕಥೆಗಳು)
·       ಪಾಶ್ಚಾತ್ಯ ಸಣ್ಣ ಕಥೆಗಳು ( ಅನುವಾದಿತ ಕಥೆಗಳು)
·       ಅಮೆರಿಕನ್ ಸಾಹಿತ್ಯ ಚರಿತ್ರೆ
·       ಇಂಡಿಯ, ಇಂದು ಮತ್ತು ನಾಳೆ ( ಜವಹರಲಾಲ್ ನೆಹರೂರ 'India Today and Tomorrow' ಪುಸ್ತಕದ ಅನುವಾದ)
·       ಚಂಡಮಾರುತ (ಷೇಕ್ ಸ್ಪಿಯರ್ ನ 'The Tempest' ಅನುವಾದ)
ಲಲಿತ ಪ್ರಬಂಧಗಳು
·       ಹಗಲುಗನಸುಗಳು
·       ಮಿನುಗು ಮಿಂಚು
·       ಅಲೆಯುವ ಮನ
·       ಜನತಾ ಜನಾರ್ದನ
·       ಸಮಗ್ರ ಲಲಿತ ಪ್ರಬಂಧಗಳು
·       ಸಮಗ್ರ ಲಲಿತ ಪ್ರಬಂಧಗಳು (ವಿಸ್ತ್ರತ ಆವೃತ್ತಿ)
ರೂಪಾಂತರಗಳು
·       ಆಷಾಢಭೂತಿ ( ಮೋಲಿಯರನ 'ತಾರ್ತುಫ್' ನಾಟಕದ ರೂಪಾಂತರ)
ವಿಮರ್ಶೆ
·       ಷೇಕ್ ಸ್ಪಿಯರ್ - ಪೂರ್ವಭಾಗ
·       ಮಾಸ್ತಿಯವರ ಕಥೆಗಳು
·       ಪೂರ್ವ ಸೂರಿಗಳೊಡನೆ
·       ಸಾಹಿತ್ಯ ಮತ್ತು ಸತ್ಯ
·       ವಿಮರ್ಶಾತ್ಮಕ ಪ್ರಬಂಧಗಳು,
ಇತರ ಕೃತಿಗಳು
·       ಚಿತ್ರಗಳು ಪತ್ರಗಳು
·       ಬಿ.ಎಂ.ಶ್ರೀಕಂಠಯ್ಯ (ವಿಮರ್ಶಾತ್ಮಕ ಜೀವನ ಚರಿತ್ರೆ)
·       ಅಪರವಯಸ್ಕನ ಅಮೆರಿಕಾ ಯಾತ್ರೆ (ಪ್ರವಾಸ ಕಥನ)
·       ಸಂಜೆಗಣ್ಣಿನ ಹಿನ್ನೋಟ ( ಆತ್ಮಚರಿತ್ರೆ)
·       ದೇವರು ( ವಿಚಾರ)
·       ಜನತಾ ಜನಾರ್ದನ ( ಲೇಖನಗಳು)
·       ಗಾನ ವಿಹಾರ ( ಲೇಖನಗಳು)
·       ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ
ಪುರಸ್ಕಾರಗಳು
·      ೧೯೭೪  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ  
·      ೧೯೭೭ ಮೈಸೂರು ವಿಶ್ವವಿದ್ಯಾನಿಲಯದ  ಗೌರವ ಡಿ.ಲಿಟ್.
·      ೧೯೭೮  ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಅಪರವಯಸ್ಕನ ಅಮೆರಿಕಾ ಯಾತ್ರೆ)
·      ೧೯೭೯  ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ  ( ಚಿತ್ರಗಳು ಪತ್ರಗಳು)
·      ೧೯೮೧ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಚಂಡಮಾರುತ)
·      ೧೯೮೪  ಅಧ್ಯಕ್ಷ ಪದ- ಕೈವಾರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
·      ೧೯೮೪  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
·      ೧೯೯೪ ಪಂಪ ಪ್ರಶಸ್ತಿ
·      ೧೯೯೯ ಮಾಸ್ತಿ ಪ್ರಶಸ್ತಿ
·      ೧೯೯೯ ಭಾರತೀಯ ವಿದ್ಯಾ ಭವನದ ಫೆಲೋಶಿಪ್
ಮೂರ್ತಿರಾಯರ ಕೃತಿಗಳ ಮುಖಪುಟ ಚಿತ್ರಗಳು 








****************

Anamadeeya
ಪ್ರತ್ಯುತ್ತರಅಳಿಸಿDarshan
ಪ್ರತ್ಯುತ್ತರಅಳಿಸಿQuestion answer
ಪ್ರತ್ಯುತ್ತರಅಳಿಸಿQuestion answer beku plz..
ಅಳಿಸಿQuestion answer
ಪ್ರತ್ಯುತ್ತರಅಳಿಸಿ