ನನ್ನ ಪುಟಗಳು

20 ನವೆಂಬರ್ 2020

10ನೇ ತರಗತಿ-ಕನ್ನಡ-ಗದ್ಯ-06-ವ್ಯಾಘ್ರಗೀತೆ - ಲೇಖಕರ ಪರಿಚಯ

ಎ. ಎನ್. ಮೂರ್ತಿರಾವ್ ಅವರ ಪರಿಚಯ
ಪರೀಕ್ಷಾ ದೃಷ್ಟಿಯಿಂದ ಕಿರು ಪರಿಚಯ:
        ಎ.ಎನ್. ಮೂರ್ತಿರಾವ್ ಕ್ರಿ.ಶ.೧೯೦೦ ರಲ್ಲಿ  ಮಂಡ್ಯಜಿಲ್ಲೆಯ ಅಕ್ಕಿಹೆಬ್ಬಾಳಿನಲ್ಲಿ ಜನಿಸಿದರು. ಇವರ ಪೂರ್ಣಹೆಸರು ಅಕ್ಕಿಹೆಬ್ಬಾಳು ನರಸಿಂಹ ಮೂರ್ತಿರಾವ್. 
        ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್  ಪ್ರಾಧ್ಯಾಪಕರಾಗಿ, ಆಕಾಶವಾಣಿಯ ಸಹಾಯಕ ನಿರ್ದೇಶಕರಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದಾರೆ. 
       ಇವರು-  ಹಗಲುಗನಸುಗಳು. ಅಲೆಯುವ ಮನ, ಅಪರವಯಸ್ಕನ ಅಮೆರಿಕಾಯಾತ್ರೆ, ಮಿನುಗು-ಮಿಂಚು, ಪೂರ್ವಸೂರಿಗಳೊಡನೆ, ಚಂಡಮಾರುತ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. 
       ಇವರಿಗೆ,  ಚಿತ್ರಗಳು- ಪತ್ರಗಳು ಎಂಬ ಕೃತಿಗೆ ಕೇಂದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದೇವರು ಎಂಬ ಕೃತಿಗೆ ಪಂಪ ಪ್ರಶಸ್ತಿ ಲಭಿಸಿದೆ. ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಿ.ಲಿಟ್. ಪದವಿ ನೀಡಿದೆ. 
        ಇವರು ೧೯೮೪ರಲ್ಲಿ ಕೈವಾರದಲ್ಲಿ ಸಮಾವೇಶಗೊಂಡ ೫೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 
**********
ಎ. ಎನ್. ಮೂರ್ತಿರಾವ್ ಅವರ ಬಗ್ಗೆ ಹೆಚ್ಚಿನ ಮಾಹಿತಿ

 ಡಾ.ಎನ್.ಮೂರ್ತಿ ರಾವ್ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾಯರು)
(ಜನನ: ಜೂನ್೧೬೧೯೦೦       ನಿಧನ: ೨೪ ಆಗಸ್ಟ್ ೨೦೦೫ 
 ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿಬರಿಯ ಶತಾಯುಷಿಯಷ್ಟೇ ಅಲ್ಲದೇಮೂರು
ಶತಮಾನಗಳಲ್ಲಿ ( ೧೯,೨೦,೨೧ನೆಯ ಶತಮಾನಗಳುಬದುಕಿದ ಅತ್ಯಂತ ಅಪರೂಪದ ವ್ಯಕ್ತಿ.
ಮಂಡ್ಯ ಜಿಲ್ಲೆಯ "ಅಕ್ಕಿಹೆಬ್ಬಾಳುಅವರ ಜನ್ಮಸ್ಥಳ.
ತಂದೆ-ತಾಯಿಗಳು : ಶ್ರೀಮತಿ ಪುಟ್ಟಮ್ಮಮತ್ತು ತಂದೆಯವರುಶ್ರೀ ಸುಬ್ಬರಾವ್.
ಹೆಂಡತಿಶ್ರೀಮತಿ ಜಯಲಕ್ಷ್ಮಿ, (ಮೂರ್ತಿರಾಯರ ರಚನೆಗಳಲ್ಲಿ 'ಲಲಿತೆ,' ಯೆಂದು ಸಂಬೋಧಿಸಲ್ಪಡುತ್ತಾರೆ.)
ಮಕ್ಕಳು : ಎನ್ಸುಬ್ಬರಾಮಯ್ಯ,ಎನ್ನಾಗರಾಜ್,ಎನ್ ರಾಮಚಂದ್ರರಾವ್.
ವಿದ್ಯಾಭ್ಯಾಸ :
ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲುಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಎಂ ; (ಇಂಗ್ಲೀಷ್ ಸಾಹಿತ್ಯದಲ್ಲಿ).
ವೃತ್ತಿ :
ಮೈಸೂರಿನ ಮಹಾರಾಜಾ ಹೈಸ್ಕೂಲಿನಲ್ಲಿ ಉಪಾಧ್ಯಾಯವೃತ್ತಿ೧೯೨೫-೧೯೨೭ ಮೈಸೂರಿನ
ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕ-೧೯೨೭-೧೯೪೦ ಶಿವಮೊಗ್ಗದ ಇಂಟರ್ಮೀಡಿಯೆಟ್
ಕಾಲೇಜಿನಲ್ಲಿ ಉಪಪ್ರಾಧ್ಯಾಪಕ-೧೯೪೦-೧೯೪೩.
ಗೌರವಕೆಲಸಗಳು :
ಕಾರ್ಯದರ್ಶಿಕನ್ನಡಸಾಹಿತ್ಯ ಪರಿಷತ್ತು-೧೯೫೪ ಅಧ್ಯಕ್ಷಕನ್ನಡ ಸಾಹಿತ್ಯ
ಪರಿಷತ್ತು-೧೯೫೪-೫೬ ಕೇಂದ್ರ ಸಾಹಿತ್ಯ ಅಕ್ಯಾಡಮಿಯ ಕನ್ನಡ ಸಲಹ ಸಮಿತಿಯ ಕನ್ವೀನರ್
ಛೇರ್ಮನ್ ದಕ್ಷಿಣ ಭಾಷಾ ಪುಸ್ತಕ ಟ್ರಸ್ಟ್  ಕನ್ನಡ ಕನ್ವೀನರ್ಛೇರ್ಮನ್ .
ಭಾರತೀಯ ಆಕಾಶ್ ವಾಣಿ  'ಕೇಂದ್ರೀಯ ಕಾರ್ಯಕ್ರಮಗಳ ಸಲಹಾಕಮಿಟಿ',  ಸದಸ್ಯರಾಗಿ 
ವರ್ಷಗಳಕಾಲ ಸೇವೆ.
ಪ್ರಬಂಧಗಳ ಮೂಲಕ ಇವರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ೧೯೩೭ರಲ್ಲಿ ಇವರ ಮೊದಲ ಕೃತಿ
"ಹೂವುಗಳು"(ಪ್ರಬಂಧ ಸಂಕಲನಪ್ರಕಟವಾಯಿತುಎಂಟು ಪ್ರಬಂಧಗಳ  ಸಂಕಲನವು ಇಂದಿಗೂ
ಒಂದು ಮಾದರಿ ಕೃತಿಯಾಗಿದೆವೈಚಾರಿಕ ನಾಸ್ತಿಕವಾದಿಯಾದ ರಾಯರ "ದೇವರುಎಂಬ ಕೃತಿಯು ಆಂಗ್ಲ ಭಾಷೆಗೆ ತರ್ಜುಮೆಯಾಗಿ ವಿಶ್ವಪ್ರಸಿಧ್ಧವಾಗಿದೆ.
ಅನುವಾದಗಳು :
·       ಸಾಕ್ರೆಟೀಸನ ಕೊನೆಯ ದಿನಗಳು ( ಪ್ಲೇಟೋನ 'Enthyphro','Crito',Apology',Phaedo' - ಸಂವಾದಗಳ ಅನುವಾದ)
·       ಹವಳದ ದ್ವೀಪ ( ಆರ.ಎಂ.ಬ್ಯಾಲಂಟಯಿನ್  'The Coral Island'  ಸಂಗ್ರಹಾನುವಾದ)
·       ಯೋಧನ ಪುನರಾಗಮನ ( ಅನುವಾದಿತ ಕಥೆಗಳು)
·       ಪಾಶ್ಚಾತ್ಯ ಸಣ್ಣ ಕಥೆಗಳು ( ಅನುವಾದಿತ ಕಥೆಗಳು)
·       ಅಮೆರಿಕನ್ ಸಾಹಿತ್ಯ ಚರಿತ್ರೆ
·       ಇಂಡಿಯಇಂದು ಮತ್ತು ನಾಳೆ ( ಜವಹರಲಾಲ್ ನೆಹರೂರ 'India Today and Tomorrow' ಪುಸ್ತಕದ ಅನುವಾದ)
·       ಚಂಡಮಾರುತ (ಷೇಕ್ ಸ್ಪಿಯರ್  'The Tempest' ಅನುವಾದ)
ಲಲಿತ ಪ್ರಬಂಧಗಳು
·       ಹಗಲುಗನಸುಗಳು
·       ಮಿನುಗು ಮಿಂಚು
·       ಅಲೆಯುವ ಮನ
·       ಜನತಾ ಜನಾರ್ದನ
·       ಸಮಗ್ರ ಲಲಿತ ಪ್ರಬಂಧಗಳು
·       ಸಮಗ್ರ ಲಲಿತ ಪ್ರಬಂಧಗಳು (ವಿಸ್ತ್ರತ ಆವೃತ್ತಿ)
ರೂಪಾಂತರಗಳು
·       ಆಷಾಢಭೂತಿ ( ಮೋಲಿಯರನ 'ತಾರ್ತುಫ್ನಾಟಕದ ರೂಪಾಂತರ)
ವಿಮರ್ಶೆ
·       ಷೇಕ್ ಸ್ಪಿಯರ್ - ಪೂರ್ವಭಾಗ
·       ಮಾಸ್ತಿಯವರ ಕಥೆಗಳು
·       ಪೂರ್ವ ಸೂರಿಗಳೊಡನೆ
·       ಸಾಹಿತ್ಯ ಮತ್ತು ಸತ್ಯ
·       ವಿಮರ್ಶಾತ್ಮಕ ಪ್ರಬಂಧಗಳು,
ಇತರ ಕೃತಿಗಳು
·       ಚಿತ್ರಗಳು ಪತ್ರಗಳು
·       ಬಿ.ಎಂ.ಶ್ರೀಕಂಠಯ್ಯ (ವಿಮರ್ಶಾತ್ಮಕ ಜೀವನ ಚರಿತ್ರೆ)
·       ಅಪರವಯಸ್ಕನ ಅಮೆರಿಕಾ ಯಾತ್ರೆ (ಪ್ರವಾಸ ಕಥನ)
·       ಸಂಜೆಗಣ್ಣಿನ ಹಿನ್ನೋಟ ( ಆತ್ಮಚರಿತ್ರೆ)
·       ದೇವರು ( ವಿಚಾರ)
·       ಜನತಾ ಜನಾರ್ದನ ( ಲೇಖನಗಳು)
·       ಗಾನ ವಿಹಾರ ( ಲೇಖನಗಳು)
·       ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ
ಪುರಸ್ಕಾರಗಳು
·      ೧೯೭೪  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ  
·      ೧೯೭೭ ಮೈಸೂರು ವಿಶ್ವವಿದ್ಯಾನಿಲಯದ  ಗೌರವ ಡಿ.ಲಿಟ್.
·      ೧೯೭೮  ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಅಪರವಯಸ್ಕನ ಅಮೆರಿಕಾ ಯಾತ್ರೆ)
·      ೧೯೭೯  ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ  ಚಿತ್ರಗಳು ಪತ್ರಗಳು)
·      ೧೯೮೧ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಚಂಡಮಾರುತ)
·      ೧೯೮೪  ಅಧ್ಯಕ್ಷ ಪದಕೈವಾರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
·      ೧೯೮೪  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
·      ೧೯೯೪ ಪಂಪ ಪ್ರಶಸ್ತಿ
·      ೧೯೯೯ ಮಾಸ್ತಿ ಪ್ರಶಸ್ತಿ
·      ೧೯೯೯ ಭಾರತೀಯ ವಿದ್ಯಾ ಭವನದ ಫೆಲೋಶಿಪ್
ಮೂರ್ತಿರಾಯರ ಕೃತಿಗಳ ಮುಖಪುಟ ಚಿತ್ರಗಳು 








****************




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ