ನನ್ನ ಪುಟಗಳು

02 ಡಿಸೆಂಬರ್ 2020

10ನೇ ತರಗತಿ-ಕನ್ನಡ-ಪದ್ಯ-01-ಸಂಕಲ್ಪಗೀತೆ - ಸಾರಾಂಶ

ಸಂಕಲ್ಪಗೀತೆ ಪದ್ಯದ ಸಾರಾಂಶ

    ಸಂಕಲ್ಪಗೀತೆ ಪದ್ಯವನ್ನು ಜಿ.ಎಸ್.ಶಿವರುದ್ರಪ್ಪನವರ 'ಎದೆತುಂಬಿ ಹಾಡಿದೆನು’ ಎಂಬ ಕವನ ಸಂಕಲನದಿಂದ ಆರಿಸಿಕೊಳ್ಳಲಾಗಿದೆ.
           ಜೀವನದಲ್ಲಿ ಧನಾತ್ಮಕ ಭಾವನೆಯನ್ನು, ದೃಢಸಂಕಲ್ಪವನ್ನು ಹೊಂದಿರಬೇಕು. ಯಾವುದೇ ರೀತಿಯ ಸವಾಲುಗಳು ಎದುರಾದಾಗಲೂ ಆತ್ಮವಿಶ್ವಾಸದ ಸಂಕಲ್ಪ ನಿಷ್ಠೆಯಿಂದ ಕ್ರಿಯಾಶೀಲರಾದಾಗ ಯಶಸ್ಸು ಲಭಿಸುತ್ತದೆ. ಭೇದಭಾವಗಳನ್ನು ಹೋಗಲಾಡಿಸಿ ಐಕ್ಯದಿಂದ ಪ್ರಯತ್ನಶೀಲರಾದಾಗ ಬಲ ವರ್ಧಿಸುತ್ತದೆ. ಭಯ ಮತ್ತು ಅನುಮಾನ ಆವರಿಸಿರುವ ಸಮಾಜವನ್ನು ದೃಢನಿಷ್ಠೆಯಿಂದ ಸ್ವಾಸ್ಥ ದ ನೆಲೆಯಾಗಿಸುವ ಹಣತೆ ಹಚ್ಚಿದಾಗ ಕತ್ತಲೆ ದೂರವಾಗುತ್ತದೆ ಎಂಬುದನ್ನು ಭಾವಗೀತೆಯ ಮೂಲಕ ವ್ಯಕ್ತಗೊಳಿಸುವುದೇ ಈ ಕವನದ ಆಶಯವಾಗಿದೆ.
*******

ಸುತ್ತಲು ಕವಿಯುವ ಕತ್ತಲೆಯೊಳಗೆ
ಪ್ರೀತಿಯ ಹಣತೆಯ ಹಚ್ಚೋಣ.
ಬಿರುಗಾಳಿಗೆ ಹೊಯ್ದಾಡುವ ಹಡಗನು
ಎಚ್ಚರದಲಿ ಮುನ್ನಡೆಸೋಣ.    || ೧ ||

ನಮ್ಮ ಸುತ್ತಲೂ ಹಬ್ಬಿರುವ ದ್ವೇಷ ಮತ್ತು ಅಂಧಕಾರದ ಕತ್ತಲೆಯನ್ನು ಕಳೆಯಲು, ಪ್ರೀತಿ ಮತ್ತು ಜ್ಞಾನದ ದೀಪವನ್ನು ಹಚ್ಚುವ ಮೂಲಕ ದ್ವೇಷರಹಿತ ಸಮಾಜ ನಿರ್ಮಾಣ ಮಾಡಬಹುದು. ಸಂಸಾರ ಸಾಗರದಲ್ಲಿ ಬಿರುಗಾಳಿಗೆ ಸಿಲುಕಿ ಹೊಯ್ದಾಡುತ್ತಿರುವ ಬದುಕೆಂಬ ಹಡಗನ್ನು ಎಚ್ಚರದಲ್ಲಿ ಮುನ್ನಡೆಸುವ ಸಂಕಲ್ಪ ಕೈಗೊಳ್ಳುವುದರಿಂದ ಎಂತಹ ಸವಾಲುಗಳನ್ನಾದರೂ ಧೈರ್ಯವಾಗಿ ಎದುರಿಸಬಹುದು - ಎಂಬುದು ಕವಿಯ ಆಶಯವಾಗಿದೆ.

ಕಲುಷಿತವಾದೀ ನದೀಜಲಗಳಿಗೆ
ಮುಂಗಾರಿನ ಮಳೆಯಾಗೋಣ.
ಬರಡಾಗಿರುವೀ ಕಾಡುಮೇಡುಗಳ
ವಸಂತವಾಗುತ ಮುಟ್ಟೋಣ.    || ೨ ||


ಮಾನವನ ದುರಾಸೆಗೆ ಸಿಲುಕಿ ಕಲುಷಿತವಾಗಿರುವ ನದೀಜಲಗಳನ್ನು ಶುದ್ಧೀಕರಿಸಲು ನಾವು ಮುಂಗಾರಿನ ಮಳೆಯಾಗಬೇಕು. ಅಂದರೆ ಪರಿಸರ ರಕ್ಷಿಸುವ ಪರಿಸರ ಪ್ರೇಮಿಯಾಗಬೇಕು. ಕಾಡುಮೇಡುಗಳು ಬರಡಾಗಿದ್ದು ಅವುಗಳನ್ನು ಉಳಿಸಿ ಬಳೆಸಬೇಕು. ಅದಕ್ಕಾಗಿ ನಾವು ಹಚ್ಚಹಸಿರಿನಿಂದ ಕಂಗೊಳಿಸುವ, ಸಮೃದ್ಧವಾದ ವಸಂತಕಾಲವಾಗಬೇಕು. ಒಟ್ಟಾರೆ ನಾವೆಲ್ಲಾ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಬೇಕು. ಎಂಬುದು ಕವಿಯ ಆಶಯವಾಗಿದೆ. 

ಬಿದ್ದುದನ್ನು ಮೇಲೆಬ್ಬಿಸಿ ನಿಲ್ಲಿಸಿ
ಹೊಸ ಭರವಸೆಗಳ ಕಟ್ಟೋಣ.
ಮನುಜರ ನಡುವಣ ಅಡ್ಡಗೋಡೆಗಳ
ಕೆಡವುತ ಸೇತುವೆಯಾಗೋಣ.    || ೩ ||


ಅತ್ಯಾಚಾರ, ಅನಾಚಾರ, ಭ್ರಷ್ಟಾಚಾರ, ಅಸ್ಪೃಶ್ಯತೆ, ಅಸಮಾನತೆಗಳಿಂದ ಅಧಃಪತನಗೊಂಡಿರುವ ಸಮಾಜವನ್ನು ಹೊಸ ಭರವಸೆಗಳ ಮೂಲಕ ಮೇಲೆತ್ತಬೇಕು. ಭಾಷೆ, ಜಾತಿ, ಮತ, ಧರ್ಮಗಳ ಭೇದಭಾವದಿಂದ ಮನುಷ್ಯರ ನಡುವೆ ಉಂಟಾಗಿರುವ ಅಸಮಾನತೆಯ ಅಡ್ಡಗೋಡೆಗಳನ್ನು ಕೆಡಹಿ, ಸಮಾನತೆಯ ಮನೋಭಾವನೆಯನ್ನು ಮೂಡಿಸುವ ಸೇತುವೆಯಾಗಬೇಕು. ಒಟ್ಟಾರೆ ಸಮಾಜವನ್ನು ಉದ್ಧರಿಸುತ್ತಾ ಭಾವೈಕ್ಯತೆಯನ್ನು ಬೆಳೆಸಬೇಕೆಂಬುದು ಕವಿಯ ಆಶಯವಾಗಿದೆ.

ಮತಗಳೆಲ್ಲವೂ ಪಥಗಳು ಎನ್ನುವ
ಹೊಸ ಎಚ್ಚರದೊಳು ಬದುಕೋಣ
ಭಯ-ಸಂಶಯದೊಳು ಕಂದಿದ ಕಣ್ಣೊಳು
ನಾಳಿನ ಕನಸನು ಬಿತ್ತೋಣ.    || ೪ ||


ಎಲ್ಲ ಮತಗಳು ಸಾಧನೆಯ ದಾರಿಗಳು ಎಂಬ ಎಚ್ಚರದಲ್ಲಿ ಬದುಕುವ ಸಂಕಲ್ಪ ಕೈಗೊಳ್ಳುವುದರಿಂದ ದೇಶದಲ್ಲಿ ಶಾಂತಿಯು ನೆಲೆಸುವಂತೆ ಮಾಡಬಹುದು. ಭಯ ಹಾಗೂ ಸಂಶಯಗಳಿಂದ ಮಸುಕಾದವರ ಕಣ್ಣುಗಳಲ್ಲಿ ಭವಿಷ್ಯದ ಹೊಂಗನಸು ಕಾಣುವಂತೆ ಭರವಸೆಯನ್ನು ತುಂಬುವ ದೃಢಸಂಕಲ್ಪವನ್ನು ಕೈಗೊಳ್ಳಬೇಕು. ಎಂದು ಕವಿ ಶ್ರೀ ಜಿ.ಎಸ್.ಶಿವರುದ್ರಪ್ಪನವರು ತಮ್ಮ ಅಭಿಪ್ರಾಯವನ್ನುವ್ಯಕ್ತಪಡಿಸುತ್ತಾರೆ.


*********

79 ಕಾಮೆಂಟ್‌ಗಳು:

  1. ಪ್ರತ್ಯುತ್ತರಗಳು
    1. Sri Krishna College College and year end we have any body ask me to be able check ✅ y in the group 😔 and provided r u r u r right we have any body ask me to check 😔 for invitations on that day and wish to see the same to you and provided access the group is my Fashion and wish u the group 😔 and provided access to the same thing happens when we need the call me to check and provided by you have any other details on the same to you and provided access to the same to you and provided access to the same thing to do it mam I am not able and wish to see the group is my Style and year end o mam said he will come in that time of my home

      ಅಳಿಸಿ
  2. Yes idu nanage tumba useful aagthaide idannu nanu notes mattu saramshakke balasuttiddene thank you so much ��

    ಪ್ರತ್ಯುತ್ತರಅಳಿಸಿ
  3. ಸೂಪರ್ ಸರ್ ಬಹಳ ಸರಳವಾಗಿದೆ ಮತ್ತು ಅರ್ಥ ಅಗೋ ರೀತಿಯಲ್ಲಿ ಇದೆ ಧನ್ಯವಾದಗಳು

    ಪ್ರತ್ಯುತ್ತರಅಳಿಸಿ