ನನ್ನ ಪುಟಗಳು

04 ಸೆಪ್ಟೆಂಬರ್ 2022

ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್
ಜನನ : ೫ ನೇ ಸೆಪ್ಟೆಂಬರ್, ೧೮೮೮
ಊರು:  ತಮಿಳುನಾಡಿನ 'ತಿರುತ್ತಣಿ'
                ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.

ಜನನ ಬಾಲ್ಯ ಹಾಗೂ ವಿದ್ಯಾಭ್ಯಾಸ
        'ಸರ್ವಪಲ್ಲಿ ರಾಧಾಕೃಷ್ಣನ್' ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ 'ತಿರುತ್ತಣಿ' ಎಂಬಲ್ಲಿ ಸೆಪ್ಟೆಂಬರ್ ೫, ೧೮೮೮ ರಲ್ಲಿ.(ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪುತ್ರ ಸರ್ವಪಲ್ಲಿ ಗೋಪಾಲ್ ಅವರು ತಮ್ಮ ತಂದೆಯ ಬಗ್ಗೆ ಬರೆದ ಜೀವನಚರಿತ್ರೆಯಲ್ಲಿ ರಾಧಾಕೃಷ್ನನ್ ಅವರ ಜನ್ಮದಿನಾಂಕ ೨೦.೦೯.೧೮೮೭ ಎಂದಿದೆ) ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, 'ರಾಧಾಕೃಷ್ಣನ್' ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು. ತಂದೆ ಸರ್ವಪಲ್ಲಿ ವೀರಸ್ವಾಮಿ ತಾಯಿ ಸೀತಮ್ಮ. ಇವರು ಜಮೀನ್ದಾರರ ಬಳಿ ದಿನಗೂಲಿ ನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ರಾಧಾಕೃಷ್ಣನ್ ಅವರ ತಂದೆಗೆ ತಮ್ಮ ಮಗನನ್ನು ಪುರೋಹಿತನನ್ನಾಗಿ ಮಾimಡುವ ಹಂಬಲವಿತ್ತು. ಬರುವ ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟ ಪಡುವ ಸಂದರ್ಭದಲ್ಲಿ 'ರಾಧಾಕೃಷ್ಣನ್‌'ಗೆ ಓದಬೇಕೆನ್ನುವ ಅಪಾರ ಹಂಬಲ! 'ಸ್ಕಾಲರ್‌ಶಿಪ್ ಹಣ'ದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ ನಲ್ಲಿ 'ತತ್ವಜ್ಞಾನ' ವಿಷಯದ ಮೇಲೆ 'ಬಿ.ಎ' ಮತ್ತು 'ಎಂ.ಎ. ಪದವಿ'ಗಳನ್ನು ಪಡೆದು ಕೊಂಡರು. 'ಸ್ನಾತಕೋತ್ತರ ಪದವಿ'ಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ 'ದಿ ಎಥಿಕ್ಸ್ ಆಫ್ ವೇದಾಂತ' ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಕೇವಲ ೨೦ ವರ್ಷದ ಬಾಲಕನ ತಲೆಯಲ್ಲಿದ್ದ 'ಹಲವು ಬಗೆಯ ಸಿದ್ಧಾಂತಗಳು', 'ವೇದಾಂತ ವಿಚಾರಗಳು' ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ, ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು.

ವಿವಾಹ
ವೆಲ್ಲೂರಿನಲ್ಲಿರುವಾಗಲೇ ಕೇವಲ ೧೬ ನೇ ವಯಸ್ಸಿನಲ್ಲಿ ಶಿವಕಾಮಮ್ಮ ಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡ ರಾಧಾಕೃಷ್ಣನ್, ೧೯೦೯ ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕ ಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ ಸೇವೆಯನ್ನಾರಂಭಿಸಿದರು.



ಮಹಾ ಶಿಕ್ಷಕನಾಗಿ 
         ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ ವಿಚಾರಗಳನ್ನು ಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿ ಫಿಲಾಸಫಿ ಆಫ್ ರವೀಂದ್ರನಾಥ್ ಠ್ಯಾಗೋರ್' ಎಂಬ ಮೊದಲ ಪುಸ್ತಕ ಬರೆದರು. ಇವರು ತೆಲುಗಿನಲ್ಲಿ ತಮ್ಮ ಸಹಿಯನ್ನು "ರಾಧಾಕ್ರಿಶ್ಣಯ್ಯ"ಎಂದು ಹಾಕುತಿದ್ದರು. ಮೈಸೂರಿನಲ್ಲಿ ಇವರ ಹೆಸರಿನ ರಸ್ತೆಯೊಂದಿದೆ.

ತತ್ವಶಾಸ್ತ್ರದಲ್ಲಿ ಅನುಪಮ ಕೊಡುಗೆ
ಭಾರತೀಯ ಪುಸ್ತಕೋದ್ಯಮದಲ್ಲಿ ಮಿಂಚುತ್ತಾ ಸಾಗಿದ ಇವರು, ಮುಂದೆ 'ಜಿನೀನ್ ಮೆನಿಫೆಸ್ಟೇಷನ್ ಆಫ್ ಇಂಡಿಯನ್ ಸ್ಪಿರಿಟ್' ಮತ್ತು 'ದಿ ರೀಜನ್ ಆಫ್ ರಿಲಿಜಿಯನ್ ಇನ್ ಕಾಂಟೆಂಪರರಿ ಫಿಲಾಸಫಿ' ಎನ್ನುವ ಪುಸ್ತಕಗಳನ್ನು ಸಹ ಬರೆದಿದ್ದಾರೆ. ತಮ್ಮ ಅಪಾರವಾದ ಪಾಂಡಿತ್ಯದಿಂದಾಗಿ ದೇಶ ವಿದೇಶಗಳಲ್ಲಿ ಮನೆಮಾತಾಗಿದ್ದರು. ಇವರ ತತ್ವಜ್ಞಾನಕ್ಕೆ ಶರಣಾದ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ 'ಧರ್ಮ ಮತ್ತು ನೀತಿಶಾಸ್ತ್ರ' ಎನ್ನುವ ವಿಷಯದ ಮೇಲೆ ಉಪನ್ಯಾಸ ನೀಡುವಂತೆ ಆಹ್ವಾನಿಸಿತು. ಸಪ್ತಸಾಗರಗಳಾಚೆ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದು, ಭಾರತೀಯ ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿದ ರಾಧಾಕೃಷ್ಣನ್, ಭಾರತೀಯ ಸನಾತನ ಧರ್ಮ, ತತ್ವಜ್ಞಾನ ಕುರಿತು ವಿದೇಶಿಯರಿಗೆ ಮನಮುಟ್ಟುವಂತೆ ಮನವರಿಕೆ ಮಾಡಿಕೊಟ್ಟು ಬಂದರು.


ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳು
         ೧೯೩೧ ರಲ್ಲಿ ಆಂಧ್ರ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ (1931-1936) ತಾವೊಬ್ಬ ಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು ತಮ್ಮ ಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿ ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ ಸುಧಾರಣೆಗಳನ್ನು ಕಂಡಿತು.
          ೧೯೩೯ ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, ೧೯೪೮ ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. ೧೯೪೯ ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.
      ಅವರು "ಶಿಕ್ಷಣವು ಜೀವನದ ಅವಿಭಾಜ್ಯ ಅಂಗ. ಅದು ಮಾನವನನ್ನು ಪರಿಪೂರ್ಣತೆ ಹಾಗೂ ಸುಸಂಸ್ಕೃತಿಯತ್ತ ಒಯ್ಯುವ ಸಾಧನ ಮಾರ್ಗ" ಎಂದು ಹೇಳಿದರು.

ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ
       ೧೯೫೨ ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ 'ರಾಧಾಕೃಷ್ಣನ್', ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. 'ರಾಧಾಕೃಷ್ಣನ್' ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿ ಪ್ರತಿಷ್ಠಿತ 'ಭಾರತ ರತ್ನ ಪ್ರಶಸ್ತಿ' ನೀಡಿ ಗೌರವಿಸಿತು.
      ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.
        ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ 'ಫಿಲಾಸಫಿ ಆಫ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್' ಪುಸ್ತಕ ಬಿಡುಗಡೆಗೊಂಡಿತು. 'ಡಾ. ರಾಜೇಂದ್ರ ಪ್ರಸಾದ್' ನಂತರ, ೧೯೬೨ ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಬಂಧಗಳನ್ನು ಉನ್ನತೀಕರಣಗೊಳಿಸುತ್ತಾ, ದೇಶದೊಳಗಿನ ಆಂತರಿಕ ಕಲಹಗಳಿಗೆ ತಿಲಾಂಜಲಿ ನೀಡುತ್ತಾ, ದೇಶವನ್ನು ಸುಭಿಕ್ಷವಾಗಿಸಿದ ಕೀರ್ತಿ 'ಡಾ.ರಾಧಾ ಕೃಷ್ಣನ್' ಅವರಿಗೆ ಸಲ್ಲುತ್ತದೆ.

ಭಾರತದ ಎರಡನೇ ರಾಷ್ಟ್ರಪತಿಯಾಗಿ
        ರಾಧಾಕೃಷ್ಣನ್ ಅವರು ಬಾರತದ ಎರಡನೆಯ ರಾಷ್ಟ್ರಪತಿಯಾಗಿ ೧೯೬೨ ರಿಂದ ೧೯೬೭ ರವರೆಗೆ ಅಮೂಲ್ಯವಾದ ಸೇವೆಸಲ್ಲಿಸಿದರಲ್ಲದೆ ಭಾರತದ ಸಂಸ್ಕೃತಿಯ ಹೆಗ್ಗಳಿಕೆಯನ್ನು ವಿದೇಶಗಳಲ್ಲಿ ಪಸರಿಸಿದರು.

ರಷ್ಯಾದೇಶದ ಅಧ್ಯಕ್ಷ ಸ್ಟಾಲಿನ್ ಅವರೊಂದಿಗಿನ ಒಡನಾಟ, ಸ್ಟಾಲಿನ್ ಅವರ ಮೆಚ್ಚುಗೆಯ ಮಾತುಗಳು
"ನೀವೊಬ್ಬರೇ ನನ್ನನ್ನು ಒಬ್ಬ ಮನುಷ್ಯನಂತೆ ಕಂಡು ವರ್ತಿಸಿದವರು. ನೀವು ನಮ್ಮನ್ನು ಬಿಟ್ಟು ಹೋಗುತ್ತಿರುವಿರಿ. ನನಗೆ ಇದು ದುಃಖ ನೀಡಿದೆ. ನೀವು ಹೆಚ್ಚು ಕಾಲ ಬಾಳಬೇಕೆಂಬುದೇ ನನ್ನಾಸೆ. ನಾನು ಹೆಚ್ಚು ಕಾಲ ಬಾಳುವುದಿಲ್ಲ" ರಷ್ಯಾ ದೇಶದ ಅಧ್ಯಕ್ಷ ಸ್ಟಾಲಿನ್ ಅವರು ರಾಧಾಕೃಷ್ಣನ್ ಅವರಿಗೆ ಮಾಸ್ಕೋದಲ್ಲಿ ನೀಡಿದ ಬೀಳ್ಕೊಡುಗೆ ಸಮಾರಂಭದಲ್ಲಿ ಹೀಗೆ ಹೇಳಿದರು. ಅಷ್ಟೇ ಅಲ್ಲ "ಅಶೋಕನು ಕಳಿಂಗ ಯುದ್ಧದ ಅನಂತರ ಶ್ರೇಷ್ಠ ಮನುಷ್ಯನಾದಂತೆ ನೀವೂ ಆಗುವಿರಿ" ಎಂದು ತಮ್ಮ ಪ್ರಥಮ ಭೇಟಿಯಲ್ಲಿ ರಾಧಾಕೃಷ್ಣನ್ ಹೇಳಿದ ಮಾತುಗಳನ್ನು ಸ್ಮರಿಸಿಕೊಂಡರು. ಪ್ರತಿಯೊಂದು ಧರ್ಮದ ಅಂತಿಮ ಸತ್ಯ ಒಂದೇ. ಪ್ರತಿ ಧರ್ಮವೂ ಅದರ ಶ್ರೇಷ್ಠ ಗುಣವನ್ನು ತೋರುತ್ತದೆ. ಅದನ್ನು ಅಳವಡಿಸಿಕೊಂಡಾಗ ಯಾವುದೇ ಧರ್ಮದ ಅಸಾಮಾನ್ಯತೆಯ ಅರಿವಾಗುವುದೆಂಬ ವಿ?ಯವನ್ನು ಅವರು ಎಲ್ಲ ಧರ್ಮಗಳ ಆಳವಾದ ಅಧ್ಯಯನದಿಂದ ಸಾಧಿಸಿ ತೋರಿಸಿದರು. ರಾಧಾಕೃಷ್ಣನ್ ತಮ್ಮ ವಿದ್ವತ್ ತಪದ ಫಲವಾಗಿ ಯುಗದ ಪರಿವರ್ತನಶೀಲ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರೆನಿಸಿದರು. 

ಶಿಕ್ಷಕರ ದಿನಾಚರಣೆ
     ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಶಿಕ್ಷಕರಾಗಿದ್ದ 'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ ೫ ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ "ಸೆಪ್ಟೆಂಬರ್ ೫ "ನ್ನು 'ಶಿಕ್ಷಕರ ದಿನ'ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ(೧೯೬೨) ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಸೇವೆಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. 
     ವಿಶ್ವದ ಎಲ್ಲ ದೇಶಗಳಲ್ಲಿ ಶಿಕ್ಷಕರ ದಿನವನ್ನು ಬೇರೆ ಬೇರೆ ದಿನಾಂಕಗಳಂದು ಆಚರಿಸಲಾಗುತ್ತಿದ್ದರೂ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಅಕ್ಟೋಬರ್ ೫ ರಂದು "ವಿಶ್ವ ಶಿಕ್ಷಕರ ದಿನ" ವನ್ನು ಆಚರಿಸಬೇಕೆಂದು "ಯುನೆಸ್ಕೋ " ಕರೆ ನೀಡಿದೆ. ೧೯೬೬ ರ ಅಕ್ಟೋಬರ್ ೫ ರಂದು ಯುನೆಸ್ಕೋ ಮತ್ತು ವಿಶ್ವ ಕಾರ್ಮಿಕ ಸಂಸ್ಥೆಯ ನಡುವಿನ ಒಪ್ಪಂದದ ಪ್ರಕಾರ ೧೯೯೪ ರ ಅಕ್ಟೋಬರ್ ೫ ರಿಂದ "ವಿಶ್ವ ಶಿಕ್ಷಕರ ದಿನ"ವನ್ನಾಚರಿಸಲಾಗುತ್ತದೆ.

ಬಿರುದುಗಳು
  • ಬ್ರಿಟನ್ ಆಕ್ಸ್ ಫಾರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೨ ),
  • ಅಮೇರಿಕ ಹಾರ್ವರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೩ ),
  • ಲಂಡನ್ ಪ್ರವಾಸದಲ್ಲಿದ್ದಾಗ "ಆರ್ಡರ್ ಆಫ್ ಮೆರಿನ್"ಪ್ರಶಸ್ತಿ,
  • ವ್ಯಾಟಿಕನ್ ಸಿಟಿ ಪೋಪ್ ಜಾನ್ ರಿಂದ "ನೈಟ್ ಆಫ್ ದ ಆರ್ಮಿ.
  • ಕೇಂದ್ರ ಸಾಹಿತ್ಯ ಅಕಾಡೆಮಿ ಫೆಲೋಶಿಪ್ -೧೯೬೮ ,
  • ಭಾರತೀಯ ವಿದ್ಯಾಭವನ "ಬ್ರಹ್ಮ ವಿದ್ಯಾ ಭಾಸ್ಕರ "ಬಿರುದು,
  • "ಟೆಂಪಲ್ಟನ್"ಪ್ರಶಸ್ತಿ ೧೯೭೩ರಲ್ಲಿ.
  • "೧೯೫೪ ರಲ್ಲಿ ಪ್ರತಿಷ್ಠಿತ 'ಭಾರತ ರತ್ನ ಪ್ರಶಸ್ತಿ' ಗೌರವ
ಡಾ.ಬಾಬುರಾಜೇಂದ್ರಪ್ರಸಾದ್ ಅವರಿಂದ ೧೯೫೪ ರಲ್ಲಿ ಪ್ರತಿಷ್ಠಿತ 'ಭಾರತ ರತ್ನ ಪ್ರಶಸ್ತಿ' ಗೌರವ
 
(ಚಿತ್ರಕೃಪೆ. ಟೈಮ್ಸ್ ಕಾಂಟೆಂಟ್.ಕಾಂ) 

ನಿಧನ
ತಮ್ಮ 'ರಾಷ್ಟ್ರಪತಿ ಹುದ್ದೆ'ಯ ಅಧಿಕಾರಾವಧಿ ಮುಗಿದ ನಂತರ ೧೯೬೭ ರಲ್ಲಿ ತಮ್ಮ 'ನಿವೃತ್ತಿ ಜೀವನ'ವನ್ನು ಮದ್ರಾಸಿನ 'ಮೈಲಾಪುರ'ದಲ್ಲಿರುವ ತಮ್ಮ ಅಧಿಕೃತ ನಿವಾಸ 'ಗಿರಿಜಾ'ದಲ್ಲಿ ಕಳೆದ ರಾಧಾಕೃಷ್ಣನ್, ೧೯೭೫ ರ ಏಪ್ರಿಲ್ ೧೭ ರಂದು ಇಹಲೋಕದ ಯಾತ್ರೆಯನ್ನು ಮುಗಿಸಿದರು.

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಅಪರೂಪದ ಭಾವಚಿತ್ರಗಳು
(ಕೃಪೆ : ಗೂಗಲ್ ಚಿತ್ರಗಳು)
 
ಜವಾಹರಲಾಲ್ ನೆಹರೂ ಅವರೊಂದಿಗೆ

 

ವಯಸ್ಸಾದರೂ ಅಧ್ಯಯನ ನಿರಂತರ


ಧ್ಯಾನ


 
ಶಿಸ್ತಿನ ಶಿಕ್ಷಕ



ಅಮೆರಿಕದ ವೈಟ್‌ಹೌಸ್ ನಿಂದ ಅಂದಿನ ಅಧ್ಯಕ್ಷ ಜಾನ್ ಎಫ್ ಕೆನಡಿ ಅವರೊಂದಿಗೆ ಹೊರಬರುತ್ತಿರುವುದು.

ರಾಧಾಕೃಷ್ಣನ್ ಅವರ ಕೈಬರಹ
 

ಶ್ರೀಮತಿ ಇಂದಿರಾಗಾಂಧಿಯವರಿಗೆ ಪ್ರಮಾಣವಚನ ಬೋಧನೆ
  

ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಠಾಗೋರ್ (ಮಧ್ಯದಲ್ಲಿ) ಅವರೊಂದಿಗೆ



ಜವಾಹರಲಾಲ್ ನೆಹರು ಅವರೊಡನೆ ಸಂವಾದ


ಲಾಲ್ ಬಹದ್ದೂರ್ ಶಾಸ್ತ್ರಿ ಅವರೊಂದಿಗೆ

1967 ರಲ್ಲಿ ಬಿಡುಗಡೆಯಾದ ಅಂಚೆ ಚೀಟಿ

1989 ರಲ್ಲಿ ಬಿಡುಗಡೆಯಾದ ಅಂಚೆ ಚೀಟಿ
 
 

ರಾಧಾಕೃಷ್ಣನ್ ಅವರ ಪುಸ್ತಕಗಳ ಮುಖಪುಟ ಚಿತ್ರಗಳು
(ಕೃಪೆ: ಗೂಗಲ್ ಚಿತ್ರಗಳು)


















ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜೀವನ ಕುರಿತ ವೀಡಿಯೋ
(ವೀಡಿಯೋ ಕೃಪೆ: ವೆಂಕಟೇಶನ್-ಯೂಟೂಬ್ ನಿಂದ)





*************

11 ಆಗಸ್ಟ್ 2022

10ನೆಯ ತರಗತಿ ಪಠ್ಯಪೂರಕ ಅಧ್ಯಯನ -ತಾಯಿ ಭಾರತಿಯ ಅಮರ ಪುತ್ರರು (Notes)

10ನೆಯ ತರಗತಿ ಪಠ್ಯಪೂರಕ ಅಧ್ಯಯನ -ನಾನು ಪ್ರಾಸ ಬಿಟ್ಟ ಕತೆ(Notes)

10ನೆಯ ತರಗತಿ ಪಠ್ಯಪೂರಕ ಅಧ್ಯಯನ -ಸ್ವದೇಶಿ ಸೂತ್ರದ ಸರಳ ಹಬ್ಬ (Notes)

10ನೆಯ ತರಗತಿ ಪಠ್ಯಪೂರಕ ಅಧ್ಯಯನ -ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು (Notes)

10ನೆಯ ತರಗತಿ ಪಠ್ಯಪೂರಕ ಅಧ್ಯಯನ -ಉದಾತ್ತ ಚಿಂತನೆಗಳು (Notes)

08 ಆಗಸ್ಟ್ 2022

10th Old Notes (CBSE)

 (ಕ್ಲಿಕ್ ಮಾಡಿ ಆರಿಸಿ)

10ನೇ ತರಗತಿ ಕನ್ನಡ ಗದ್ಯಪಾಠಗಳ ಪ್ರಶ್ನೋತ್ತರಗಳು (10th Kannada Notes Prose)(Old)

CBSE

------------

10ನೇ ತರಗತಿ ಪ್ರಥಮಭಾಷೆ ಕನ್ನಡ ಪದ್ಯಪಾಠಗಳು

(10th Kannada Notes Poem)

 

------------

10ನೇ ತರಗತಿ ಪ್ರಥಮಭಾಷೆ ಕನ್ನಡ ಪಠ್ಯಪೂರಕ ಅಧ್ಯಯನ

(10th Kannada Notes Supplementary Reading)

 

*****************


 

22 ಜುಲೈ 2022

10ನೇ ತರಗತಿ ಕನ್ನಡ ಪದ್ಯ-06 ಛಲಮನೆ ಮೆಱೆವೆಂ - ಸಾರಾಂಶ (10th-Kan-Poem-6-chalamanemerevem-Saramsha)

'ಛಲಮೆನೆ ಮೆಱೆವೆಂ' ಪದ್ಯಭಾಗದ ಸಾರಾಂಶ
ಪೀಠಿಕೆಮಹಾಭರತ ಯುದ್ದದಲ್ಲಿ ತನ್ನೆಲ್ಲ ಸಹೋದರರನ್ನೂ ಆಪ್ತಮಿತ್ರನಾದ ಕರ್ಣನನ್ನೂ ಕಳೆದುಕೊಂಡ ದುರ್ಯೋಧನನು ತನ್ನ ತಂದೆ ತಾಯಿಯರ ಅಪೇಕ್ಷೆಯಂತೆ ರಣರಂಗದಲ್ಲಿ ಶರಶಯ್ಯೆಯಲ್ಲಿ ಮಲಗಿದ್ದ ತಾತ ಭೀಷ್ಮರ ಸಲಹೆಯನ್ನು ಪಡೆಯಲು ಬರುತ್ತಾನೆಭೀಷ್ಮರು ಯುದ್ಧವನ್ನು ನಿಲ್ಲಿಸಿ ಪಾಂಡವರೊಡನೆ ಸಂಧಿ ಮಾಡಿಕಒಳ್ಳುವುದು ಸೂಕ್ತವೆಂದು ದುರ್ಯೋಧನನಿಗೆ ಸಲಹೆ ನೀಡುತಾರೆಆದರೆ ಸಂಧಿಮಾಡಿಕೊಳ್ಳು ಒಪ್ಪದ ದುರ್ಯೋಧನನು ತಾನು ಯುದ್ಧಮಾಡುವುದಾಗಿ ಹೇಳುತ್ತಾನೆ.
        ಸಂದರ್ಭದಲ್ಲಿ ದುರ್ಯೋಧನನು ಭೀಷ್ಮರೊಂದಿಗೆ ಮಾತನಾಡುವಾಗ ಆತನಲ್ಲಿ ಛಲಅವನ ದೃಢನಿರ್ಧಾರ ಮತ್ತು ಅವನ ಅಭಿಮಾನದ ಮಾತುಗಳನ್ನು ಇಲ್ಲಿ ಸಂಗ್ರಹಿಸಿ ಕೊಡಲಾಗಿದೆ.
********
ವಚನ : ಇಂಬುಕೆಯ್ವೆಯಪ್ಪೊಡೆ ಪಾಂಡವರನೊಡಂಬಡಿಸಿ ಸಂಧಿಯಂ ಮಾಡಿ ಪೂರ್ವಕ್ರಮದೊಳ್ ನಡೆವಂತು ಮಾೞ್ಪೆಂ ಇನ್ನುಮವರೆಮ್ಮಂದುದಂ ಇಂಬುಕೆಯ್ಯದವರ್ ಮೀಱವರಲ್ಲ ನೀನುಮೆಮ್ಮ ಪೇೞ್ದುದಂ ಮೀಱದೆ ನೆಗೞಲ್ವೇೞ್ಕುಮೆನೆ ಸುಯೋಧನಂ ಮುಗುಳ್ನಗೆ ನಕ್ಕು-
ಸಾರಾಂಶ: ನೀನು ಒಪ್ಪುವೆಯಾದರೆ ಪಾಂಡವರನ್ನು ಒಪ್ಪಿಸಿ ಒಪ್ಪಂದ ಮಾಡಿ ಹಿಂದಿನಂತೆ ನಡೆಯುವ ಹಾಗೆ ಮಾಡುವೆನುಈಗಲೂ ಕೂಡ ಅವರು ನಮ್ಮ ಮಾತನ್ನು ಮೀರದೆ ಪಾಲಿಸುತ್ತಾರೆನೀನೂ ಕೂಡ ನಮ್ಮ ಮಾತನ್ನು ಮೀರದೆ ನಡೆದುಕೊಳ್ಳಬೇಕುಎಂದು ಭೀಷ್ಮರು ಹೇಳಿದಾಗ ದುರ್ಯೋಧನನು ಮುಗುಳು ನಗೆ ನಕ್ಕು-

ಕಂ|| ನಿಮಗೆ ಪೊಡೆಮಟ್ಟು ಪೋಪೀ|
ಸಮಕಟ್ಟಿಂ ಬಂದೆನಹಿತರೊಳ್ ಸಂಧಿಯನೇಂ||
ಸಮಕೊಳಿಸಲೆಂದು ಬಂದೆನೆ|
ಸಮರದೊಳೆನಗಜ್ಜ ಪೇೞಮಾವುದು ಕಜ್ಜಂ||  ||||
ಸಾರಾಂಶನಿಮಗೆ  ನಮಸ್ಕರಿಸಿ ಹೋಗಲೆಂದು ಬಂದೆನೇ ಹೊರತು ಶತ್ರುಗಳೊಡನೆ ಒಪ್ಪಂದವನ್ನು ಏರ್ಪಡಿಸುವುದಕ್ಕೆಂದು ಬಂದೆನೆಅಜ್ಜಾಯುದ್ಧದಲ್ಲಿ ಇನ್ನು ನನ್ನ ಕಾರ್ಯವೇನೆಂಬುದನ್ನು ಹೇಳಿರಿ.

ಕಂ|| ನೆಲಕಿಱವೆನೆಂದು ಬಗೆದಿರೆ|
ಚಲಕಿಱವೆಂ ಪಾಂಡುಸುತರೊಳೀನೆಲನಿದು ಪಾ||
ೞ್ನೆಲನೆನಗೆ ದಿನಪಸುತನಂ|
ಕೊಲಿಸಿದ ನೆಲನೊಡನೆ ಮತ್ತೆ ಪುದುವಾೞ್ದಪೆನೇ||     ||||
ಸಾರಾಂಶನಾನು ಭೂಮಿಗಾಗಿ ಹೋರಾಡುವೆನೆಂದು ಭಾವಿಸಿದಿರಾಛಲಕ್ಕಾಗಿ ಪಾಂಡವರೊಡನೆ ಹೋರಾಡುವೆನು ಭೂಮಿ ನನಗೆ ಪಾಳು ಭೂಮಿದಿನಪಸುತನಾದ ಕರ್ಣನನ್ನು ಕೊಲ್ಲಿಸಿದ  ಭೂಮಿಯೊಡನೆ ನಾನು ಮತ್ತೆ ಬಾಳುವೆನೆ?

|| ಎನ್ನಣುಗಾಳನೆನ್ನಣುಗದಮ್ಮನನಿಕ್ಕಿದ ಪಾರ್ಥಭೀಮರು|
ಳ್ಳನ್ನೆಗಮೊಲ್ಲೆನೆನ್ನೊಡಲೊಳೆನ್ನಸುವುಳ್ಳಿನಮಜ್ಜ ಸಂಧಿಯಂ||
ಮುನ್ನಮವಂದಿರಿರ್ಬರುಮನಿಕ್ಕುವೆನಿಕ್ಕಿ ಬೞಕ್ಕೆ ಸಂಧಿಗೆ|
ಯ್ವೊನ್ನೆಗೞ್ದಂತಕಾತ್ಮಜನೊಳೆನ್ನೞಲಾಱದೊಡಾಗದೆಂಬೆನೇ||   ||||
ಸಾರಾಂಶ: ನನ್ನ ಪ್ರೀತಿಯ ಗೆಳೆಯನನ್ನು(ಕರ್ಣನನ್ನುನನ್ನ ಪ್ರೀತಿಯ ತಮ್ಮನನ್ನು(ದುಶ್ಯಾಸನಕೊಂದ ಅರ್ಜುನ-ಭೀಮರು ಬದುಕಿರುವವರೆಗೆ ನನ್ನ ದೇಹದಲ್ಲಿ ಪ್ರಾಣ ಇರುವವರೆಗೂ ಅಜ್ಜಾನಾನು ಸಂಧಿಯನ್ನು ಒಪ್ಪುವುದಿಲ್ಲಮೊದಲು  ಇಬ್ಬರನ್ನೂ ಕೊಲ್ಲುವೆನುಅವರನ್ನು ಕೊಂದ ಬಳಿಕ ಧರ್ಮರಾಜನೊಡನೆ ಸಂಧಿಮಾಡಿಕೊಳ್ಳುತ್ತೇನೆನನ್ನ ದುಃಖ ಆರಿದ ನಂತರ ಸಂಧಿ ಆಗುವುದಿಲ್ಲ ಎನ್ನುವೆನೇ?

ಕಂ|| ಪುಟ್ಟಿದ ನೂರ್ವರುಮೆನ್ನೊಡ|
ವುಟ್ಟಿದ ನೂರ್ವರುಮಿದಿರ್ಚಿ ಸತ್ತೊಡೆ ಕೋಪಂ||
ಪುಟ್ಟಿ ಪೊದೞ್ದುದು ಸತ್ತರ್
ಪುಟ್ಟರೆ ಪಾಂಡವರೊಳಿಱದು ಛಲಮನೆ ಮೆಱೆವೆಂ ||   ||||
ಸಾರಾಂಶ: ಹುಟ್ಟಿದ ನೂರು ಜನರೂನನ್ನ ಒಡ ಹುಟ್ಟಿದ ನೂರುಮಂದಿ ಸಹೋದರರು (ಯುದ್ಧದಲ್ಲಿಹೋರಾಡಿ ಸತ್ತರುಆದ್ದರಿಂದ ನನ್ನಲ್ಲಿ ಕೋಪ ಹುಟ್ಟಿ ಬೆಳೆಯಿತು(ಪೊದೞ್ದುದು). ಸತ್ತವರೇನು ಮತ್ತೆ ಹುಟ್ಟುವುದಿಲ್ಲವೇಪಾಂಡವರೊಡನೆ ಹೋರಾಡಿ ನನ್ನ ಛಲವನ್ನೇ ಮೆರೆಯುತ್ತೇನೆ.

ಕಂ|| ಕಾದದಿರೆನಜ್ಜ ಪಾಂಡವ|
ರಾದರ್ ಮೇಣಿಂದಿನೊಂದೆ ಸಮರದೊಳಾಂ ಮೇ||
ಣಾದೆನದಱಂದೆ ಪಾಂಡವ
ರ್ಗಾದುದು ಮೇಣಾಯ್ತು ಕೌರವಂಗವನಿತಳಂ||       ||||
ಸಾರಾಂಶ: ಅಜ್ಜನಾನು ಹೋರಾಡದೆ ಬಿಡುವುದಿಲ್ಲಇಂದಿನ ಯುದ್ಧದಲ್ಲಿ ಪಾಂಡವರು ಉಳಿಯಬೇಕು ಇಲ್ಲವೆ ನಾನು ಉಳಿಯಬೇಕುಆದ್ದರಿಂದ  ಭೂಮಿ ಪಾಂಡವರದಾಗಬೇಕು ಇಲ್ಲವೇ ಕೌರವನದಾಗಬೇಕು ಎಂದು ದುರ್ಯೋಧನನು ಶರಶಯ್ಯೆಯಲ್ಲಿ ಮಲಗಿದ್ದ ಭೀಷ್ಮಾಚಾರ್ಯರಿಗೆ ಹೇಳಿದನು.


**************