ನನ್ನ ಪುಟಗಳು

26 ಸೆಪ್ಟೆಂಬರ್ 2023

10ನೇ ತರಗತಿ ಪದ್ಯಪಾಠ-7 ವೀರಲವ-ಪೂರಕ ಮಾಹಿತಿ/ಟಿಪ್ಪಣಿಗಳು (10th-Veeralava-tippani)

ಕಥಾ ಹಿನ್ನೆಲೆ :    ರಾಮಾಯಣ, ಮಹಾಭಾರತ, ಭಾಗವತಗಳಲ್ಲಿ ಅನೇಕ ಸಾಹಸಿಗಳಾದ ಬಾಲಕರ ಕಥೆಗಳು ಇವೆ. ಅಂತಹವುಗಳಲ್ಲಿ ಲವನ ಕತೆಯೂ ಒಂದು. ರಾವಣನನ್ನು ಸಂಹರಿಸಿ, ಅಯೋಧೈಗೆ ಸೀತಾಸಮೇತನಾಗಿ ಬಂದ ರಾಮ ಪ್ರಜಾನುರಾಗಿಯಾಗಿ ರಾಜ್ಯಭಾರ ಮಾಡುತ್ತಿದ್ದನು. ಗರ್ಭಿಣಿಯಾದ ಸೀತೆ ಒಂದು ದಿನ ವಾಲ್ಮೀಕಿ ಮಹರ್ಷಿಗಳ ಆಶ್ರಮವನ್ನು ನೋಡಬೇಕೆಂಬ ಆಸೆಯನ್ನು ವ್ಯಕ್ತಪಡಿಸುತ್ತಾಳೆ. ಕಾಕತಾಳೀಯವಾಗಿ ಅದೇ ರಾತ್ರಿ ಪ್ರಜೆಯೊಬ್ಬ ಸೀತೆಯ ಬಗ್ಗೆ ಅವಮಾನದ ನುಡಿಗಳನ್ನು ಆಡುತ್ತಾನೆ. ಇದನ್ನು ತಿಳಿದ ರಾಮನು ತಮ್ಮನಾದ ಲಕ್ಷ್ಮಣನನ್ನು ಕರೆದು ತುಂಬುಗರ್ಭಿಣಿಯಾದ ಸೀತೆಯನ್ನು ಕಾಡಿನಲ್ಲಿ ಬಿಟ್ಟು ಬರುವಂತೆ ಆಜ್ಞಾಪಿಸುತ್ತಾನೆ. ಪ್ರಜೆಗಳ ಅಭಿಪ್ರಾಯವೇ ಸರ್ವಸ್ವವೆಂದು ತಿಳಿದ ರಾಮನ ಈ ಆಜ್ಞೆಯಂತೆ ಲಕ್ಷ್ಮಣ ವಾಲ್ಮೀಕಿ ಆಶ್ರಮಕ್ಕೆ ಹೋಗುವ ನೆಪದೊಂದಿಗೆ ಸೀತೆಯನ್ನು ಕಾಡಿಗೆ ಕೊಂಡೊಯ್ಯುತ್ತಾನೆ. 

    ಕಾಡಿನಲ್ಲಿ ಏಕಾಂಗಿಯಾಗಿದ್ದ ಸೀತೆ ದುಃಖಿಸುತ್ತಿರುವ ಸಂದರ್ಭದಲ್ಲಿ ಆ ಪ್ರದೇಶಕ್ಕೆ ಬಂದ ವಾಲ್ಮೀಕಿ ಮಹರ್ಷಿಗಳು ಸೀತೆಯನ್ನು ತಮ್ಮಾಶ್ರಮಕ್ಕೆ ಕರೆದೊಯ್ಯುತ್ತಾರೆ. ಆಶ್ರಮದಲ್ಲಿ ಕೆಲವೇ ದಿನಕ್ಕೆ ಸೀತೆ ಅವಳಿ ಮಕ್ಕಳನ್ನು ಹಡೆಯುತ್ತಾಳೆ. ವಾಲ್ಮೀಕಿ ಮಹರ್ಷಿಗಳು ಈ ಮಕ್ಕಳಿಗೆ ಕುಶ, ಲವರೆಂದು ನಾಮಕರಣ ಮಾಡಿ ಸಕಲ ವಿದ್ಯಾಪಾರಂಗತರನ್ನಾಗಿ ಮಾಡುತ್ತಾರೆ. 

    ಇತ್ತ ಸೀತೆಯ ಅಗಲುವಿಕೆಯಿಂದ ರಾಮ ಮಾನಸಿಕವಾಗಿ ದುಃಖಕ್ಕೀಡಾಗುತ್ತಾನೆ. ರಾವಣನ ವಧೆಯಿಂದ ಬ್ರಹ್ಮಹತ್ಯಾದೋ? ಬಂದಿರುವುದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಮಹರ್ಷಿಗಳ ಆದೇಶದಂತೆ ರಾಮ ಅಶ್ವಮೇಧವನ್ನು ಕೈಗೊಂಡು, ಸಂಚಾರಕ್ಕೆ ತೆರಳಿದ ಕುದುರೆಯ ಬೆಂಗಾವಲಿಗೆ ಶತ್ರುಘ್ನನನ್ನು ಕಳುಹಿಸುತ್ತಾನೆ. ದೇಶದೇಶಗಳನ್ನು ಸುತ್ತಾಡಿದ ಅಶ್ವಮೇಧದ ಕುದುರೆ ಒಂದು ದಿನ ವಾಲ್ಮೀಕಿ ಆಶ್ರಮಕ್ಕೆ ಬರುತ್ತದೆ. ಶ್ರೀರಾಮನೇ ತನ್ನ ತಂದೆ ಎಂದು ತಿಳಿಯದ ಲವ ಕುದುರೆಯನ್ನು ಕಟ್ಟುವ ಸನ್ನಿವೇಶವೇ ಈ ಪಾಠ ಭಾಗ. 

ರಘು : ಸೂರ್ಯ ವಂಶದ ಅರಸ. ತನ್ನ ಪರಾಕ್ರಮದಿಂದ ಭೂಮಂಡಲವನ್ನು ಗೆದ್ದು ’ವಿಶ್ವಜಿತ್’ ಎಂಬ ಯಾಗ ಮಾಡಿ ಸರ್ವಸ್ವವನ್ನು ದಾನಮಾಡಿ ಪ್ರಸಿದ್ಧನಾದ. ಸೂರ್ಯವಂಶದ ಶ್ರೇ? ಅರಸನಾದ ಕಾರಣ ಈತನ ಕಾಲಾನಂತರ ಸೂರ್ಯವಂಶಕ್ಕೆ ರಘುವಂಶ ಎಂಬ ಹೆಸರು ಬಂತು. 

ವಾಲ್ಮೀಕಿ : ಒಬ್ಬ ಬ್ರಹ್ಮರ್ಷಿ. ದಾರಿಗಳ್ಳನಾಗಿದ್ದ ಬೇಡ. ನಾರದ ಮಹರ್ಷಿಗಳ ಬೋಧನೆಯಿಂದ ರಾಮನಾಮ ಜಪಿಸುತ್ತಿದ್ದಾಗ ಈತನ ಮೈಮೇಲೆ ಹುತ್ತ (ವಲ್ಮೀಕ) ಬೆಳೆಯಿತು. ನಾರದ ಮಹರ್ಷಿಗಳಿಂದಾಗಿ ವಲ್ಮೀಕದಿಂದ ಹೊರಗೆ ಬಂದ ಈತನು ವಾಲ್ಮೀಕಿ ಎಂದು ಪ್ರಸಿದ್ಧನಾದನು. ಆದಿಕಾವ್ಯ ರಾಮಾಯಣವನ್ನು ರಚಿಸಿ ಕೀರ್ತಿವಂತನಾದ. 

ವರುಣ : ಅ?ದಿಕ್ಪಾಲಕರಲ್ಲಿ ಒಬ್ಬನಾದ ಈತ ಪಶ್ಚಿಮದಿಕ್ಕಿಗೆ ಒಡೆಯ. ಜಲಾಧಿಪತಿ ಎಂದು ಪ್ರಸಿದ್ಧನಾದವ. 

ಲವ : ಶ್ರೀರಾಮನಿಂದ ಸೀತೆಯಲ್ಲಿ ಜನಿಸಿದ ಅವಳಿ ಮಕ್ಕಳಲ್ಲಿ ಚಿಕ್ಕವ. ಶ್ರೀರಾಮನಿಂದ ಪರಿತ್ಯಕ್ತಳಾದ ತುಂಬುಗರ್ಭಿಣಿ ಸೀತೆ ವಾಲ್ಮೀಕಿ ಆಶ್ರಮದಲ್ಲಿ ಆಶ್ರಯ ಪಡೆದ ಸಂದರ್ಭದಲ್ಲಿ ಜನಿಸಿದವ. ವಾಲ್ಮೀಕಿಯಿಂದ ರಚಿತವಾದ ರಾಮಾಯಣವನ್ನು ಅಣ್ಣ ಕುಶನ ಜೊತೆ ಸೇರಿ ಹಾಡುತ್ತಿದ್ದ. 

ಅಬ್ಧಿಪ : ಅಬ್ಧಿ - ಸಮುದ್ರ, ಪ - ಒಡೆಯ, ಅಬ್ಧಿಪ - ಸಮುದ್ರದ ಒಡೆಯ - ವರುಣ 

ಜೇಗೆಯ್ : ಬಿಲ್ಲಿಗೆ ಕಟ್ಟುವ ಹಗ್ಗವನ್ನು ಹೆದೆ ಎಂದು ಕರೆಯುತ್ತಾರೆ. ಈ ಹೆದೆಯನ್ನು ಬೇಕಾದಾಗ ಮಾತ್ರ ಬಿಗಿಯಲಾಗುತ್ತದೆ. ಉಳಿದ ಸಂದರ್ಭದಲ್ಲಿ ಬಿಲ್ಲಿನ ಒಂದು ತುದಿಯಲ್ಲಿ ಮಾತ್ರ ಕಟ್ಟಿರುತ್ತಾರೆ. ಯುದ್ಧಕ್ಕೆ ಸನ್ನದ್ಧನಾದಾಗ ಬಿಲ್ಲುಗಾರ ತನ್ನ ಬಿಲ್ಲಿನ ಹೆದೆಯನ್ನು ಅದರ ಇನ್ನೊಂದು ತುದಿಗೆ ಬಿಗಿಯಾಗಿ ಕಟ್ಟುತ್ತಾನೆ. ಈ ಹೆದೆಯ ಬಿಗಿತ ಸರಿಯಾಗಿದ್ದರೆ ಮಾತ್ರ ಬಾಣ ಗುರಿ ಮುಟ್ಟುತ್ತದೆ. ಅದಕ್ಕಾಗಿ ಬಿಲ್ಲುಗಾರ ಬಿಲ್ಲಿನ ಹೆದೆಯನ್ನು ಆಕರ್ಣಾಂತ (ಕಿವಿಯವರೆಗೆ) ಎಳೆದು ಬಿಡುತ್ತಾನೆ. ಆಗ ಆ ಹೆದೆ ಮೊದಲಿದ್ದ ಸ್ಥಳಕ್ಕೆ ಹೋಗುವಾಗ ’ಝೇಂ’ ಎಂಬ ಧ್ವನಿ ಮಾಡುತ್ತದೆ. ಈ ಧ್ವನಿಯ ಸಹಾಯದಿಂದ ಬಿಲ್ಲುಗಾರ ಹೆದೆಯ ಬಿಗಿತ ಸರಿಯಾಗಿದೆಯೇ ಎಂದು ಪರೀಕ್ಷಿಸುತ್ತಾನೆ. ಈ ಕ್ರಿಯೆಗೆ ’ಜೇಗೆಯ್ಯು’ವುದು ಎಂದು ಹೇಳಲಾಗುತ್ತದೆ. 

ಯಜ್ಞಾಶ್ವ :



ವಾಲ್ಮೀಕಿ ಋಷಿಗಳಿಂದ ಲವ-ಕುಶರಿಗೆ ವಿದ್ಯಾಭ್ಯಾಸ:









******* ಕನ್ನಡ ದೀವಿಗೆ ******

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ